Breaking News

ರೈಲ್ವೆ ನಿಲ್ದಾಣದ ಬಳಿ ಸಿಕ್ಕ ಅನುಮಾನಾಸ್ಪದ ಬಾಕ್ಸ್​​ನಲ್ಲಿ ಉಪ್ಪು ಪತ್ತೆ: ಶಿವಮೊಗ್ಗ ಎಸ್​ಪಿ​

Spread the love

ಶಿವಮೊಗ್ಗ : ನಗರದ ರೈಲು ನಿಲ್ದಾಣದ ಬಳಿ ಭಾನುವಾರ ಪತ್ತೆಯಾದ ಬಾಕ್ಸ್​ನಲ್ಲಿ ಯಾವುದೇ ಸ್ಫೋಟಕ ವಸ್ತುಗಳಿರಲಿಲ್ಲ.

ಬಾಕ್ಸ್​ನಲ್ಲಿ ಪತ್ತೆಯಾಗಿರುವುದು ಉಪ್ಪು ಎಂದು ಮೇಲ್ನೋಟಕ್ಕೆ ಅನಿಸಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ಶಿವಮೊಗ್ಗದ ರೈಲು ನಿಲ್ದಾಣದ ಪಾರ್ಕಿಂಗ್ ಜಾಗದ ಬಳಿ ಪತ್ತೆಯಾದ ಬಾಕ್ಸ್​ನಲ್ಲಿ ಅನುಮಾನಾಸ್ಪದ ವಸ್ತುಗಳಿವೆ ಎಂದು ತಿಳಿದು ಬಂದ ಕಾರಣ ಪರಿಶೀಲನೆ ಮಾಡಿದ್ದೆವು. ನಂತರ ಅದು ಇನ್ನಷ್ಟು ಹೆಚ್ಚಿನ ಪರಿಶೀಲನೆ ಅವಶ್ಯಕತೆ ಇದೆ ಎಂದು ತಿಳಿದು ಬೆಂಗಳೂರಿನಿಂದ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳವನ್ನು ಕರೆಯಿಸಲಾಗಿತ್ತು.

ತಂಡ ಆಗಮಿಸಿ, ನಾಲ್ಕು ರೀತಿಯ ತಪಾಸಣೆ ನಡೆಸಿದ್ದಾರೆ. ನಂತರ ಅಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಇಲ್ಲ ಎಂದು ಖಾತರಿ ಪರಿಸಿಕೊಂಡ ಬಳಿಕ ಅದನ್ನು ನಮ್ಮ ವಶಕ್ಕೆ ಪಡೆದುಕೊಳ್ಳಲಾಯಿತು. ಅದರಲ್ಲಿ ಉಪ್ಪು ಹಾಗೂ ಪ್ಲಾಸ್ಟಿಕ್‌ ವಸ್ತುಗಳು ಪತ್ತೆಯಾಗಿವೆ. ಇದರಿಂದಲೇ ಬಾಕ್ಸ್ ತುಂಬ ಭಾರವಾಗಿತ್ತು. ಅದರ ಜೊತೆಗೆ ಸಿ.ಸಿ ಕ್ಯಾಮರಾದಲ್ಲಿ ಕೆಲ ಸಾಕ್ಷ್ಯಗಳು ಸಿಕ್ಕಿವೆ ಎಂದು ಎಸ್​ಪಿ ಮಾಹಿತಿ ನೀಡಿದ್ದಾರೆ.

ನ. 3 ರಂದು ಕಾರಿನಲ್ಲಿ ಬಂದ ಇಬ್ಬರು ಬಾಕ್ಸ್ ಇಟ್ಟು ಹೋಗಿದ್ದಾರೆ. ಅವರು ಯಾರು? ಯಾಕೆ ಅಲ್ಲಿ ಇಟ್ಟರು? ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ. ವಶಕ್ಕೆ ಪಡೆದುಕೊಂಡ ಇಬ್ಬರು ಸಹ ಕ್ರಿಮಿನಲ್ ಹಿನ್ನೆಲೆ ಉಳ್ಳವರು ಅನ್ನೋದು ಮೇಲ್ನೋಟಕ್ಕೆ ಕಂಡು ಬಂದಿದೆ. ಅವರ ವಿಚಾರಣೆ ನಡೆಸಲಾಗುತ್ತಿದೆ. ಬಾಕ್ಸ್ ಮೇಲಿನ ಗೋಣಿ ಚೀಲವು ಎಲ್ಲಿ ಉತ್ಪಾದನೆ ಆಗಿದೆ ಎಂದು ಬರೆಯಲಾಗಿದೆ ಅಷ್ಟೆ. ಆದರೇ, ಅಲ್ಲಿ ಇದುವರೆಗೂ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಎಸ್ಪಿ ಮಿಥುನ್​ ಕುಮಾರ್​ ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ