Breaking News
Home / ರಾಜಕೀಯ / ಸಿದ್ದರಾಮಯ್ಯರಿಂದ ಹಾಸನಾಂಬೆ, ಸಿದ್ದೇಶ್ವರಸ್ವಾಮಿ ದೇವರ ದರ್ಶನ; ಮಳೆಗಾಗಿ ಸಿಎಂ ಪ್ರಾರ್ಥನೆ

ಸಿದ್ದರಾಮಯ್ಯರಿಂದ ಹಾಸನಾಂಬೆ, ಸಿದ್ದೇಶ್ವರಸ್ವಾಮಿ ದೇವರ ದರ್ಶನ; ಮಳೆಗಾಗಿ ಸಿಎಂ ಪ್ರಾರ್ಥನೆ

Spread the love

ಹಾಸನ: ಸಿಎಂ ಸಿದ್ದರಾಮಯ್ಯನವರು ಮಂಗಳವಾರ ಹಾಸನಾಂಬೆ ದೇವಿ ಮತ್ತು ಸಿದ್ದೇಶ್ವರಸ್ವಾಮಿ ದೇವರ ದರ್ಶನ ಪಡೆದು ರಾಜ್ಯದಲ್ಲಿ ಮಳೆಗಾಗಿ ಪ್ರಾರ್ಥಿಸಿದರು.

ದೇವರ ದರ್ಶನದ ಬಳಿಕ ಮಾತನಾಡಿ, ಉಸ್ತುವಾರಿ ಸಚಿವ ರಾಜಣ್ಣ ಅವರು ನನಗೆ ಹಾಸನಾಂಬೆ ದೇವಿಯ ಪೂಜೆ ಇದೆ, ಆಶೀರ್ವಾದ ಪಡೆಯಿರಿ ಎಂದು ಹೇಳಿದರು. ಹೀಗಾಗಿ ಇದೇ ಮೊದಲ ಬಾರಿಗೆ ಹಾಸನಾಂಬೆ ದರ್ಶನ ಪಡೆದಿದ್ದೇನೆ. ರಾಜಣ್ಣ ಅವರ ಮಾರ್ಗದರ್ಶನದಲ್ಲಿ ಹಾಸನಾಂಬೆ ಪೂಜೆ ಚೆನ್ನಾಗಿ ಆಗಿದೆ. ಲಕ್ಷಾಂತರ ಜನರು ಭಾಗಿಯಾಗಿ ಹಾಸನಾಂಬೆಯ ಕೃಪೆಯನ್ನು ಪಡೆದಿದ್ದಾರೆ. ಹಾಸನಾಂಬೆ ದೇವಿ ಐತಿಹಾಸಿಕ ಮಹತ್ವ ಹೊಂದಿದ್ದು, ದೇವಾಲಯದ ಸಮೀಪವೇ ಸಿದ್ದೇಶ್ವರಸ್ವಾಮಿ ದೇವಾಲಯ ಇದೆ. ಎರಡೂ ದೇವರ ಆಶೀರ್ವಾದ ಬೇಡಿದ್ದೇನೆ. ರಾಜ್ಯದ ಜನರಿಗೆ ಒಳ್ಳೆಯದಾಗಲಿ. ರಾಜ್ಯದಲ್ಲಿ ಬರಗಾಲ ಇದೆ. ಹಿಂಗಾರು ಮಳೆಯಾದರೂ ಆಗಿ ರೈತರಿಗೆ ಅನುಕೂಲ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು.

ಈ ವರ್ಷ ತೀವ್ರ ಬರಗಾಲ ಇದೆ. 214 ತಾಲೂಕುಗಳನ್ನು ಬರಗಾಲ ಎಂದು ಘೋಷಣೆ ಮಾಡಿದ್ದೇವೆ. ಇಡೀ ರಾಜ್ಯ ಬರಗಾಲಕ್ಕೆ ತುತ್ತಾದ ಕಾಲ ಇರಲಿಲ್ಲ. ಶೇಕಡಾ 50ಕ್ಕೂ ಹೆಚ್ಚು ಪ್ರಮಾಣದ ಬೆಳೆ ನಷ್ಟವಾಗಿದೆ. ಪರಿಹಾರಕ್ಕೆ ನಾವು ಕೇಂದ್ರಕ್ಕೆ ಮನವಿ ಮಾಡಿದ್ದೆವು. ಕೇಂದ್ರ ಸರ್ಕಾರದ ನಾಲ್ಕು ತಂಡದವರು ಬರ ಪ್ರವಾಸ ಮಾಡಿ, ಅಧಿಕಾರಿಗಳಿಂದ ಜನರಿಂದ ಮಾಹಿತಿ ಪಡೆದು ಹೋಗಿದ್ದಾರೆ.


Spread the love

About Laxminews 24x7

Check Also

ಗೃಹಲಕ್ಷ್ಮೀ ಹಣದಿಂದ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಡ ಮಹಿಳೆ

Spread the love ರಾಮದುರ್ಗ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಕಳೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ