Breaking News

ಮಹಾರಾಷ್ಟ್ರ ಏಕೀಕರಣ ಸಮಿತಿ ಬಲ ಸಂಪೂರ್ಣ ಕುಗ್ಗಿದೆ: ಬಸವರಾಜ್ ಹೊರಟ್ಟಿ

Spread the love

ಬೆಳಗಾವಿ: ಸುವರ್ಣ ವಿಧಾನಸೌಧ ನಿರ್ಮಾಣದಿಂದ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಕ್ಷೀಣವಾಗಿದೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಬಲ ಸಂಪೂರ್ಣ ಕುಗ್ಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು.

ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ಅಧಿವೇಶನ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗಡಿಜಿಲ್ಲೆಯಲ್ಲಿ ವಿಧಾನಸೌಧ ನಿರ್ಮಾಣದಿಂದ ಕನ್ನಡಕ್ಕೆ ಸ್ಫೂರ್ತಿ ಬಂದಂತಾಗಿದೆ.

ಅನೇಕ ಸರಕಾರಿ ಕಚೇರಿಗಳು ಕೂಡ ಸ್ಥಳಾಂತರಗೊಂಡಿವೆ. ಇದರಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಸದ್ಯಕ್ಕೆ ಇಲ್ಲದಂತಾಗಿದೆ ಎಂದು ಹೇಳಿದರು


Spread the love

About Laxminews 24x7

Check Also

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Spread the love ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ