Breaking News

ಆಡಳಿತ ವೈಫಲ್ಯ ಖಂಡಿಸಿ ಸರ್ಕಾರದ ವಿರುದ್ಧ 3 ದಿನ ಧರಣಿ;B.S.Y.

Spread the love

ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಖಂಡಿಸಿ ಹಾಗು ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ವಿರೋಧಿಸಿ ತಿಂಗಳಾಂತ್ಯಕ್ಕೆ ಮೂರು ದಿನ ಸರ್ಕಾರದ ವಿರುದ್ಧ ಧರಣಿ ನಡೆಸಲಿದ್ದು ಬೆಳಗಾವಿ ಅಧಿವೇಶನದಲ್ಲಿಯೂ ಈ ವಿಚಾರವನ್ನು ಇರಿಸಿಕೊಂಡು ಬಿಜೆಪಿ ಹೋರಾಟ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಆರ್.ಆರ್. ನಗರದಲ್ಲಿ ಅರ್ಧಕ್ಕೆ ನಿಂತಿರುವ ಕಾಮಗಾರಿಗಳ ವೀಕ್ಷಣೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುನಿರತ್ನ ವಿರುದ್ಧ ಈ ರೀತಿಯ ಸೇಡಿನ ರಾಜಕಾರಣ ಸರಿಯಲ್ಲ. ಆಡಳಿತ ಪಕ್ಷ ನಮ್ಮ ಶಾಸಕ ಮುನಿರತ್ನ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿರುವುದನ್ನು ಖಂಡಿಸುತ್ತೇನೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಮಂಜೂರಾಗಿ ಅರ್ಧಂಬರ್ಧ ಕೆಲಸ ಆಗಿ ನಿಲ್ಲಿಸುವ ಮೂಲಕ ಒಂದು ರೀತಿಯ ಗೊಂದಲದ ವಾತಾವರಣ ನಿರ್ಮಾಣ ಮಾಡಿದೆ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಕೊಡಲಿ ಪೆಟ್ಟು ನೀಡಿದೆ ಎಂದು ಆರೋಪಿಸಿದರು.

ಕೇವಲ ಈ ಕ್ಷೇತ್ರ ಮಾತ್ರವಲ್ಲ, ಎಲ್ಲಾ ಕಡೆ ಗುತ್ತಿಗೆದಾರರು ಕೆಲಸ ಮಾಡಲು ಸಿದ್ಧರಿಲ್ಲ. ಸರ್ಕಾರ ಗುತ್ತಿಗೆದಾರರಿಗೆ ಹಣ ಕೊಡುತ್ತಿಲ್ಲ, ಏಳರಿಂದ ಎಂಟು ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ. ಹೀಗಾಗಿ ಯಾವುದೇ ಗುತ್ತಿಗೆದಾರರು ಕೆಲಸ ಮಾಡಲು ಮುಂದೆ ಬರುತ್ತಿಲ್ಲ. ಈ ರೀತಿಯ ವಾತಾವರಣ ಇಡೀ ರಾಜ್ಯದಲ್ಲಿ ಇದೆ. ಈ ಸರ್ಕಾರದ ಆಡಳಿತ ವೈಖರಿಯನ್ನು ಖಂಡಿಸುತ್ತೇನೆ. ಹಾಗಾಗಿ ಮೂರು ದಿನ ವಿಧಾನಸೌಧದ ಮುಂದೆ ಅಥವಾ ಫ್ರೀಡಂ ಪಾರ್ಕ್​ನಲ್ಲಿ ಸತ್ಯಾಗ್ರಹ ಮಾಡುತ್ತೇವೆ. ಸಾವಿರಾರು ಜನ ಸೇರಿ ಸರ್ಕಾರದ ನೀತಿಯ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ದಿನಾಂಕವನ್ನು ನಾಳೆ ನಿಗದಿ ಮಾಡುತ್ತೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ