Breaking News

ಅಕಾಲಿಕ ಮಳೆಗೆ ಭತ್ತದ ಬೆಳೆ ಹಾನಿ ಅಂದಾಜು 70 ಕೋಟಿ ರೂ ಹಾನಿ

Spread the love

ಗಂಗಾವತಿ (ಕೊಪ್ಪಳ) : ಬುಧವಾರ ರಾತ್ರಿಯಿಂದ ಗುರುವಾರ ಬೆಳಗಿನ ಜಾವದವರೆಗೂ ಸುರಿದ ಅಕಾಲಿಕ ಮಳೆ ಹಾಗೂ ಬೀಸಿದ ಭಾರಿ ಗಾಳಿಗೆ ಗಂಗಾವತಿ ಮತ್ತು ಕಾರಟಗಿ ತಾಲೂಕಿನಲ್ಲಿ 3500ಕ್ಕೂ ಅಧಿಕ ಹೆಕ್ಟೇರ್​ ಪ್ರದೇಶದಲ್ಲಿ ಬೆಳೆದಿದ್ದ ಭತ್ತದ ಬೆಳೆ ಹಾನಿಯಾಗಿದೆ.

 

ಕೊಯ್ಲಿನ ಹಂತಕ್ಕೆ ಬಂದಿದ್ದ ಸೋನಾಮಸೂರಿ ತಳಿಯ ಭತ್ತದ ಬೆಳೆ ಹೆಚ್ಚಿನ ಹಾನಿಯಾಗಿದೆ. ಕಾರಟಗಿ ತಾಲೂಕು ಒಂದರಲ್ಲಿಯೇ ಅತಿಹೆಚ್ಚು ಹಾನಿಯಾಗಿದ್ದು, ಸುಮಾರು ಮೂರು ಸಾವಿರ ಹೆಕ್ಟೇರ್​ ಪ್ರದೇಶದಲ್ಲಿ ಭತ್ತ ಹಾನಿಯಾಗಿದೆ. ಗಂಗಾವತಿ ತಾಲೂಕಿನಲ್ಲಿ ಸುಮಾರು ಐದು ನೂರು ಹೆಕ್ಟೇರ್​ ಪ್ರದೇಶದಲ್ಲಿನ ಭತ್ತ ಹಾನಿಯಾಗಿದೆ.

ಕಾರಟಗಿ-ಸಿದ್ದಾಪುರ ಹೋಬಳಿಯ ಬೂದಗುಂಪಾ, ಯರೋಡಣಾ, ಈಳಿಗೆನೂರು, ಮಲರ್​ನಹಳ್ಳಿ, ಗಂಗಾವತಿ-ಮರಳಿ ಹೋಬಳಿಯ ಹೊಸಳ್ಳಿ, ಹಣವಾಳ, ಹೊಸಕೇರಿ, ಶ್ರೀರಾಮನಗರ, ಮರಳಿ, ನರಸಾಪುರ ಮೊದಲಾದ ಗ್ರಾಮಗಳಲ್ಲಿನ ಭತ್ತ ಹಾನಿಯಾಗಿದೆ ಎಂಬುದಾಗಿ ತಿಳಿದುಬಂದಿದೆ. ಭತ್ತದ ಹಾನಿ ಮಾಹಿತಿ ಲಭಿಸುತ್ತಿದ್ದಂತೆಯೆ ಅಧಿಕಾರಿಗಳು ಸಮೀಕ್ಷೆಗೆ ಇಳಿದಿದ್ದಾರೆ.

 


Spread the love

About Laxminews 24x7

Check Also

ಆಟವಾಡುತ್ತಾ ಕೆರೆ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

Spread the loveಬೆಂಗಳೂರು: ಆಟವಾಡುತ್ತಾ ಕೆರೆಯ ಬಳಿ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ