Breaking News

ಕುಂದಾನಗರಿಯಲ್ಲಿ ಕೋಟೆ ಕಟ್ಟಿ ಬೆಳಕಿನ ಹಬ್ಬ ಸಂಭ್ರಮಿಸುವ ಮಕ್ಕಳು

Spread the love

ಬೆಳಗಾವಿ: ದೀಪಾವಳಿ ಹಬ್ಬವನ್ನು ಒಂದೊಂದು ಭಾಗಗಳಲ್ಲಿ ಒಂದೊಂದು ರೀತಿ ಆಚರಿಸುತ್ತಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಕ್ಕಳು ಕೋಟೆ ಕಟ್ಟಿ ಸಂಭ್ರಮಿಸುತ್ತಾರೆ. ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಸಾಹಸ, ಪರಾಕ್ರಮವನ್ನು ಇಂದಿನ ಪೀಳಿಗೆಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ. ಆ ಕುರಿತು ಈಟಿವಿ ಭಾರತದ ವಿಶೇಷ ವರದಿ ಇಲ್ಲಿದೆ.

ದೀಪಾವಳಿ ಹಬ್ಬಕ್ಕೆ ಪಟಾಕಿ ಹಚ್ಚಿ, ದೀಪ ಬೆಳಗಿಸಿ, ಸಿಹಿ ಹಂಚಿ ಸಂಭ್ರಮಿಸುವುದು ಸಾಮಾನ್ಯ. ಆದರೆ ಕುಂದಾನಗರಿಯ ಮಕ್ಕಳು ಮಾತ್ರ ಐತಿಹಾಸಿಕ ಕೋಟೆಗಳ ಮಾದರಿ ನಿರ್ಮಿಸಿ ಅನೇಕ ವರ್ಷಗಳಿಂದ ಅರ್ಥಪೂರ್ಣವಾಗಿ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರು ಗೆದ್ದಿದ್ದ ಐತಿಹಾಸಿಕ ಕೋಟೆಗಳಾದ ರಾಯಗಡ, ಶಿವನೇರಿ, ಭೀಮಗಡ, ಪ್ರತಾಪಗಡ, ಪಾರಗಡ, ರಾಜಗಡ, ತೋರಣಗಡ, ಸಿಂಹಗಡ ಕೋಟೆಗಳ ಮಾದರಿಯನ್ನು ನಿರ್ಮಿಸಿರುವ ಮಕ್ಕಳು ಕೋಟೆಗೆ ಬಣ್ಣ, ಸುಣ್ಣ ಬಳಿದು ಅಂತಿಮ ಸ್ಪರ್ಶ ನೀಡುತ್ತಿದ್ದಾರೆ. ನಾಳೆ ದೀಪಾವಳಿ ಹಬ್ಬದ ದಿನ ಕೋಟೆ ಉದ್ಘಾಟಿಸಿ, ಶಿವಾಜಿ ಮಹಾರಾಜರ ಮೂರ್ತಿಗೆ ಪೂಜೆ ಸಲ್ಲಿಸಲಿದ್ದಾರೆ.

 ಕೋಟೆ ಕಟ್ಟಿ ಬೆಳಕಿನ ಹಬ್ಬ ಸಂಭ್ರಮಿಸುವ ಮಕ್ಕಳು

ಮಕ್ಕಳ ಉತ್ಸಾಹಕ್ಕೆ ಪಾರವೇ ಇಲ್ಲ: ಬೆಳಗಾವಿಯ ಮಕ್ಕಳಿಗೆ ಶಿವಾಜಿ ಮಹಾರಾಜರ ಬಗ್ಗೆ ಅತಿಯಾದ ಅಭಿಮಾನ. ಸ್ವಯಂ ಸ್ಫೂರ್ತಿಯಿಂದ ಮಕ್ಕಳೇ ಕೂಡಿಕೊಂಡು ಮಣ್ಣು, ಕಲ್ಲು ಸಂಗ್ರಹಿಸಿ ಕೋಟೆ ಕಟ್ಟುವ ಅವರ ಉತ್ಸಾಹ ಹೇಳತೀರದು. ಇದಕ್ಕೆ ಒಂದು ತಿಂಗಳಿನಿಂದ ಆ ಚಿಣ್ಣರು ತಯಾರಿ ನಡೆಸಿರುತ್ತಾರೆ. ಮಕ್ಕಳ ಪ್ರಯತ್ನದಿಂದ ಬಡಕಲ ಗಲ್ಲಿಯಲ್ಲಿ ಎರಡೂವರೇ ಅಡಿ ಎತ್ತರದ ಪ್ರತಾಪಗಡ ಕೋಟೆ ಮಾದರಿ ಸಿದ್ಧವಾಗಿದೆ.

ಈಟಿವಿ ಭಾರತ ಜೊತೆಗೆ ಮಾತನಾಡಿದ ಓಂಕಾರ ಅಕ್ಕತಂಗೇರಹಾಳ, ಹಿಂದವಿ ಸಾಮ್ರಾಜ್ಯ ಸಂಸ್ಥಾಪಕ ಶಿವಾಜಿ ಮಹಾರಾಜರ ಬಗ್ಗೆ ನಮಗೆಲ್ಲಾ ಅತಿಯಾದ ಅಭಿಮಾನ. ಇನ್ನು ದೀಪಾವಳಿಯಲ್ಲಿ ಎಲ್ಲರಂತೆ ಪಟಾಕಿ ಸಿಡಿಸಿ ಎಂಜಾಯ್ ಮಾಡೋದು ನಮಗೆ ಇಷ್ಟ ಆಗುವುದಿಲ್ಲ. ನಮಗೆ ಕೋಟೆ ಕಟ್ಟುವುದರಲ್ಲೇ ಖುಷಿ ಸಿಗುತ್ತದೆ. ನಾಳೆ ಪೂಜೆ ಇರುತ್ತದೆ‌. ಕೋಟೆ ಸುತ್ತಲೂ ಶಿವಾಜಿ ಮಹಾರಾಜರ ಜೀವನಚರಿತ್ರೆ ಬಿಂಬಿಸುವ ಚಿತ್ರ ಅಳವಡಿಸುತ್ತೇವೆ. ಇದೆಲ್ಲಾ ನಮಗೆ ಬಹಳಷ್ಟು ಖುಷಿ ಕೊಡುತ್ತದೆ ಎಂದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ