Breaking News

ಆಹಾರ ಉದ್ಯಮಗಳ ಮೇಲೆ ಐಟಿ ದಾಳಿ

Spread the love

ಬೆಂಗಳೂರು: ಜ್ಯುವೆಲ್ಲರಿ‌ ಅಂಗಡಿ ಮಾಲೀಕರು, ಗುತ್ತಿಗೆದಾರರ ಮನೆ-ಕಚೇರಿಗಳ‌ ಮೇಲೆ‌ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ (ಐಟಿ) ದಾಳಿ ನಡೆಸಿತ್ತು.

ಇಂದು ಆಹಾರ ಉದ್ಯಮಗಳ‌ ಮೇಲೆ ದಾಳಿ‌ ನಡೆಸಿ‌, ಕಡತಗಳ ಪರಿಶೀಲನೆ ನಡೆಸುತ್ತಿದೆ.

ರಾಜಾಜಿನಗರದ ಇಂಡಸ್ಟ್ರಿಯಲ್‌ ಎಸ್ಟೇಟ್ ಬಳಿಯಿರುವ ಪಿ.ಎಸ್.ಆಗ್ರೋ ಫುಡ್ ಎಲ್​ಎಲ್​ಪಿ ಕಾರ್ಖಾನೆ, ಬಿ.ವಿ.ಕೆ.ಅಯ್ಯಂಗಾರ್ ರಸ್ತೆಯಲ್ಲಿರುವ ಮಾಣಿಕ್ ಮೇವಾ ಸ್ಟೋರ್ ಮೇಲೆ ದಾಳಿ ನಡೆದಿದೆ. ಈ ಎರಡು ಆಹಾರ ಕಂಪನಿಗಳು ಒಣ ಹಣ್ಣುಗಳ ವ್ಯಾಪಾರ ನಡೆಸುತ್ತಿವೆ‌. ಆದಾಯಕ್ಕೆ ಪ್ರತಿಯಾಗಿ ತೆರಿಗೆ ಪಾವತಿಸದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ ಸುಮಾರು 10ಕ್ಕೂ ಹೆಚ್ಚು ಕಾರುಗಳಲ್ಲಿ ಆಗಮಿಸಿದ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ