Breaking News

ಪಿಚ್ ಬದಲಾವಣೆ ವಿವಾದ ತಳ್ಳಿಹಾಕಿದ ಕಿವೀಸ್​ ನಾಯಕ; ಭಾರತ ತಂಡಕ್ಕೆ ಅಭಿನಂದಿಸಿದ ಕೇನ್ ವಿಲಿಯಮ್ಸನ್

Spread the love

ಮುಂಬೈ(ಮಹಾರಾಷ್ಟ್ರ): ಏಕದಿನ ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯದ ವೇಳೆ ಬಿಸಿಸಿಐ ಕೊನೆಯ ಕ್ಷಣದಲ್ಲಿ ಪಿಚ್ ಬದಲಾಯಿಸಿದೆ ಎಂದು ಕೆಲ ಆಂಗ್ಲ ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಈ ಬಗ್ಗೆ ಐಸಿಸಿ ಈಗಾಗಲೇ ವಿವರಣೆ ನೀಡಿದೆ. ಇತ್ತೀಚೆಗೆ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಕೂಡ ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಬುಧವಾರ ಭಾರತ ಮತ್ತು ಕಿವೀಸ್ ನಡುವೆ ಮೊದಲ ಸೆಮಿಫೈನಲ್ ನಡೆಯಿತು. ಪಂದ್ಯದ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ‘ಪಿಚ್ ವಿವಾದ’ವನ್ನು ತಳ್ಳಿಹಾಕಿದ್ದಾರೆ.

ಈ ಪಿಚ್‌ನಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ. ಈ ಪಿಚ್ ಅನ್ನು ಪಂದ್ಯಗಳಿಗೆ ಬಳಸಲಾಗುತ್ತದೆ. ಇನ್ನೂ ತುಂಬಾ ಚೆನ್ನಾಗಿದೆ. ಎರಡೂ ತಂಡಗಳಿಗೆ ಅನುಕೂಲವಾಗಿಯೇ ಈ ಪಿಚ್​ ಕಾರ್ಯನಿರ್ವಹಿಸಿದೆ. ಮೊದಲಾರ್ಧದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಆಕ್ರಮಣಕಾರಿ ರನ್ ಗಳಿಸಿದರು. ಪರಿಸ್ಥಿತಿಗೆ ತಕ್ಕಂತೆ ತಮ್ಮ ಆಟದ ಶೈಲಿಯನ್ನು ಬದಲಾಯಿಸಿಕೊಂಡಂತಿದೆ. ಆದರೆ, ನಾಕೌಟ್ ಹಂತದಲ್ಲಿ ಈ ರೀತಿ ಮನೆಗೆ ಹೋಗ್ತಿರುವುದು ಬೇಸರ ತಂದಿದೆ ಎಂದರು.

ಕಳೆದ ಏಳು ವಾರಗಳಲ್ಲಿ ನಾವು ಅದ್ಭುತ ಪ್ರಯಾಣ ಮಾಡಿದ್ದೇವೆ. ಸಣ್ಣ ಪುಟ್ಟ ನೆನಪುಗಳು ಅಳಿಸಿ ಹೋಗದಂತೆ ಉಳಿಯುತ್ತವೆ. ಮೇಲಾಗಿ ಅತ್ಯುತ್ತಮ ತಂಡದ ಎದುರು ಸೋತು ಟೂರ್ನಿಯಿಂದ ನಿರ್ಗಮಿಸುತ್ತಿದ್ದೇವೆ. ಸದ್ಯ ಟೀಂ ಇಂಡಿಯಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿದೆ ಎಂದರು


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ