Breaking News

ಜಮೀರ್ ಹೇಳಿಕೆ ಖಂಡನೀಯ, ಇಂಥ ತಪ್ಪಾಗದಂತೆ ಎಚ್ಚರಿಕೆ ವಹಿಸಲಿ: ವಿಜಯೇಂದ್ರ

Spread the love

ಬೆಂಗಳೂರು: “ಜಮೀರ್ ಅಹಮದ್ ಯಾವುದೋ ಒಂದು ಸಮುದಾಯದ ಜವಾಬ್ದಾರಿ ತಗೊಂಡಿಲ್ಲ.

ನೀವು ನಿಮ್ಮ ಅಂತರಾಳದ ಮಾತು ಆಡಿದ್ದೀರಿ. ಈ ಹೇಳಿಕೆ ನಿಜಕ್ಕೂ ದುರದೃಷ್ಟಕರ. ಇನ್ನು ಮುಂದೆ ಈ ರೀತಿ ಮಾತಾಡದಂತೆ ಎಚ್ಚರಿಕೆ ವಹಿಸಿ” ಎಂದು ಸಚಿವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ ನೀಡಿದರು.

ಜಮೀರ್ ಅಹಮ್ಮದ್ ಅವರು ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಈ ಕುರಿತು ಶಿವಾನಂದ ವೃತ್ತದಲ್ಲಿರುವ ಅಪಾರ್ಟ್​ಮೆಂಟ್​​ನಲ್ಲಿ ಶುಕ್ರವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, “ಜಮೀರ್ ಅಹಮದ್ ಅವರ ಬಾಯಲ್ಲಿ ಇಂಥ ಮಾತು ದುರದೃಷ್ಟಕರ ಹಾಗೂ ಖಂಡನೀಯ. ಸಭಾಧ್ಯಕ್ಷರ ಪೀಠಕ್ಕೆ ಶಾಸಕರು ಗೌರವ ಕೊಡುವುದೇ ವಿನಃ ಯಾವುದೋ ವ್ಯಕ್ತಿಗಲ್ಲ. ಇನ್ಮುಂದಾದರೂ ಈ ರೀತಿ ಮಾತಾಡುವಾಗ ಎಚ್ಚರಿಕೆ ಇರಲಿ” ಎಂದರು.


Spread the love

About Laxminews 24x7

Check Also

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Spread the loveಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ