Breaking News

ನಾನು, ವಿಜಯೇಂದ್ರ ಜೋಡೆತ್ತುಗಳಂತೆ ಕೆಲಸ ಮಾಡುತ್ತೇವೆ, ಲೋಕಸಭೆಯ 28 ಸ್ಥಾನಗಳನ್ನೂ ಗೆಲ್ಲುತ್ತೇವೆ:

Spread the love

ಬೆಂಗಳೂರು: ವಿಜಯೇಂದ್ರ ಹಾಗೂ ನನಗಿಬ್ಬರಿಗೂ ಹೊಸ ಜವಾಬ್ದಾರಿ ಸಿಕ್ಕಿದೆ.

ವರಿಷ್ಠರು ಲೋಕಸಭಾ ಕ್ಷೇತ್ರದಲ್ಲಿ ಎಲ್ಲ 28 ಕ್ಷೇತ್ರಗಳು ಎನ್.ಡಿ.ಎ ಮೈತ್ರಿಕೂಟದ ಪಾಲಾಗಬೇಕು ಹಾಗೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಬೇಕು ಎನ್ನುವ ಟಾಸ್ಕ್ ನೀಡಿದ್ದಾರೆ. ನಾವಿಬ್ಬರೂ ಯಾವುದೇ ವಿವಾದಗಳಿಲ್ಲದೇ, ಜೋಡೆತ್ತುಗಳಂತೆ ಕೆಲಸ ಮಾಡುವ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಶೋಕ್, ನಾನು ಹಾಗೂ ವಿಜಯೇಂದ್ರ ಇಬ್ಬರೂ ಕೂಡ ಪಕ್ಷದ ಸಂಘಟನೆಯಿಂದ ಬೆಳೆದವರು. ನಾವು ಪ್ರಾರಂಭದಿಂದಲೂ ಪರಿವಾರದ ಸಂಘಟನೆಗಳಲ್ಲಿ ಕೆಲಸ ಮಾಡಿದವರು. ರಾಜ್ಯದಲ್ಲಿ ಯಾವ ರೀತಿ ಯಡಿಯೂರಪ್ಪ ರೈತನ ನಾಯಕರಾಗಿ ಇಡೀ ರಾಜ್ಯವನ್ನು ಸುತ್ತುತ್ತಿದ್ದರೋ ಹಾಗೆಯೇ ನಾವಿಬ್ಬರೂ ರಾಜ್ಯಾದ್ಯಂತ ಸುತ್ತುವ ಮೂಲಕ ಬಿಜೆಪಿಯನ್ನು ಇನ್ನೂ ಶಕ್ತಿಶಾಲಿಯಾಗಿ ಬೆಳೆಸುವ ಕೆಲಸ ಮಾಡುತ್ತೇವೆ ಎಂದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ