Breaking News

ಆಸ್ತಿ ವಿಚಾರಕ್ಕೆ ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರವಾಗಿ ಹತ್ಯೆ

Spread the love

ಹುಬ್ಬಳ್ಳಿ: ಆಸ್ತಿ ವಿಚಾರವಾಗಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದೆ.

ಬಗಡಗೇರಿ ಗ್ರಾಮ ಪಂಚಾಯಿತಿ ಸದಸ್ಯ ನಿಂಗಪ್ಪ ದಾಸಪ್ಪನವರ ಹತ್ಯೆಯಾದವರು. ಆಸ್ತಿ ವಿಚಾರವಾಗಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

ಆಸ್ತಿಗಾಗಿ ಪತ್ನಿಯನ್ನೇ ಕೊಲೆಗೈದ ಪತಿ: ಇತ್ತೀಚಿಗೆ, ಪತ್ನಿ ಹೆಸರಿನಲ್ಲಿದ್ದ ಕೋಟ್ಯಂತರ ರೂ. ವೌಲ್ಯದ ಆಸ್ತಿಗಾಗಿ ಮಲಗಿದ್ದ ಸಮಯದಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಪತಿಯೇ ಹತ್ಯೆ ಮಾಡಿದ್ದ ಘಟನೆ ಮಂಡ್ಯ ನಗರದ ವಿವಿ ನಗರ ಬಡಾವಣೆಯಲ್ಲಿ ನಡೆದಿತ್ತು. ಎಸ್. ಶೃತಿ (32) ಕೊಲೆಯಾದವರು. ಟಿ.ಎನ್. ಸೋಮಶೇಖರ್ (41) ಕೊಲೆ ಮಾಡಿದ ಪತಿ.

ಕೊಲೆಯಾದ ಎಸ್ ಶೃತಿ ಹೆಸರಿನಲ್ಲಿ ಮೈಸೂರಿನಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಆಸ್ತಿ ಇದ್ದು, ಈ ಆಸ್ತಿಯಲ್ಲಿ ಒಂದನ್ನು ಮಾರಾಟ ಮಾಡಲು ಅವರು ಪ್ರಯತ್ನಿಸುತ್ತಿದ್ದರು. ಒಪ್ಪದ ಪತಿ ಸೋಮಶೇಖರ್ ಎಲ್ಲ ಆಸ್ತಿಯನ್ನು ತನ್ನದಾಗಿಸಿಕೊಳ್ಳುವ ಉದ್ದೇಶದಿಂದ ನ.10ರಂದು ರಾತ್ರಿ ಮಲಗಿದ್ದ ಸಮಯದಲ್ಲಿ ದಿಂಬು ಮತ್ತು ಬೆಡ್‌ಶೀಟ್​ಅನ್ನು ಶೃತಿಯ ಮುಖದ ಮೇಲೆ ಬಿಗಿಯಾಗಿ ಅದುಮಿ, ಉಸಿರುಗಟ್ಟಿಸಿ ಸಾಯಿಸಿರುವುದಾಗಿ ಪೊಲೀಸರೆದರು ತಪ್ಪೊಪ್ಪಿಕೊಂಡಿದ್ದ


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ