Breaking News

ಕರ್ತವ್ಯ ನಿರ್ಲಕ್ಷ್ಯ ಆರೋಪ. ಸಿಪಿಐ ಸಾಗರ್ ಅಮಾನತು

Spread the love

ಲಬುರಗಿ: ಕೆಇಎ ಪರೀಕ್ಷಾ ಅಕ್ರಮ ರೂವಾರಿ ಎನ್ನಲಾಗುತ್ತಿರುವ ಆರ್.ಡಿ. ಪಾಟೀಲ್, ವಾರ್ದ ಅಪಾರ್ಟ್ಮೆಂಟ್ ನಿಂದ ತಪ್ಪಿಸಿಕೊಳ್ಳುವಲ್ಲಿ ಉಂಟಾಗಿರುವ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಿಪಿಐ ಸಾಗರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಈ ಆದೇಶವನ್ನು ಕಲ್ಬುರ್ಗಿ ಈಶಾನ್ಯ ವಲಯದ ಐಜಿಪಿ ಹೊರಡಿಸಿದ್ದಾರೆ ಕಲ್ಬುರ್ಗಿ ನಗರದ ವಾರ್ದಾ ಅಪಾರ್ಟ್ಮೆಂಟಿನಲ್ಲಿ ಆರ್ ಡಿ ಪಾಟೀಲ್ ಇರುವ ಮಾಹಿತಿ ಅಫ್ಜಲ್ಪುರ್ ಠಾಣೆಯ ಸಿಪಿಐ ಪಂಡಿತ್ ಸಾಗರ್ ಅವರಿಗೆ ತಲುಪಿತ್ತು.

ಆದರೆ, ಅವರು ತಡವಾಗಿ ಅಪಾರ್ಟ್ಮೆಂಟ್ ಗೆ ಹೋದರು. ಇದರಿಂದಾಗಿ ಆರೋಪಿತ ತಪ್ಪಿಸಿಕೊಳ್ಳಲು ಸಾಧ್ಯವಾಗಿದೆ ಎನ್ನುವ ಗುರುತರವಾದ ಆರೋಪವನ್ನು ಎದುರಿಸುತ್ತಿದ್ದರು.

ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿರುವ ಸಾಗರ್ ಅವರನ್ನು ಅಮಾನತ್ತು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆ

Spread the love  ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಸಮೀಪದ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ, ಮಹಿಳಾ ಸ್ವಾವಲಂಬಿ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ