Breaking News

ಜಾನುವಾರುಗಳಂತೆ ಲಾರಿಯಲ್ಲಿ ಕಾರ್ಮಿಕರ ಸಾಗಾಟ……….

Spread the love

ಧಾರವಾಡ/ಹುಬ್ಬಳ್ಳಿ: ಚಿತ್ರದುರ್ಗ ಜಿಲ್ಲೆಯಿಂದ ಲಾರಿಗಳ ಮೂಲಕ ಮಹಾರಾಷ್ಟ್ರಕ್ಕೆ ಹೊರಟಿದ್ದ ಕಾರ್ಮಿಕರನ್ನು ಧಾರವಾಡ ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ಹಾಗೂ ಗ್ರಾಮೀಣ ತಹಶೀಲ್ದಾರ ಪ್ರಕಾಶ್ ನಾಶಿ ತಡೆದಿದ್ದಾರೆ.

ಹುಬ್ಬಳ್ಳಿ ಸಮೀಪದ ವರೂರ- ಅಗಡಿ ಬಳಿ ಪೊಲೀಸರ ಕಣ್ಣು ತಪ್ಪಿಸಿ ಲಾರಿಯಲ್ಲಿ ನೂರಾರು ಜನರು ಮಹಾರಾಷ್ಟ್ರಕ್ಕೆ ಹೊರಟಿದ್ದರು. ಖಚಿತ ಮಾಹಿತಿ ಮೇಲೆ ಲಾರಿಯನ್ನು ತಪಾಸಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಎಲ್ಲರನ್ನು ವೈದ್ಯಕೀಯ ಪರೀಕ್ಷೆ ನಡೆಸಿ ಬೇರೆ ವಾಹನಗಳ ಮೂಲಕ ಕಳುಹಿಸಿಕೊಡುವ ಏರ್ಪಾಡುಗಳನ್ನು ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ಮಾಡಿದ್ದಾರೆ.

ಲಾಕ್‍ಡೌನ್ ಸಡಿಲಿಕೆಯಾದ ಮೇಲೆ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೆ ಇವೆ. ಅನ್ಯ ರಾಜ್ಯದಿಂದ ಆಗಮಿಸಿದವರಿಂದಲೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿವೆ. ಇಂದು ಸಹ 75 ಹೊಸ ಪ್ರಕರಣಗಳು ಬೆಳಕಿಗೆ ಬಂದಿದೆ.https://youtu.be/KZ6ciVeX_Nc


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ