Breaking News

ಭವಿಷ್ಯ ಹೇಳ್ತಿದ್ದವಳ ತಲೆ ಸೀಳಿದ ಹಂತಕರು! ಅತ್ಯಾಚಾರವೆಸಗಿ ಕೊಲೆ?

Spread the love

ಲಬುರಗಿಯಲ್ಲಿ ಒಂಟಿ ವೃದ್ದೆಯ ಭೀಕರ ಹತ್ಯೆ ಪ್ರಕರಣ ದಾಖಲಿಸಿಕೊಂಡಿರೋ ಆರ್ ಜೆ ನಗರ ಪೊಲೀಸರು ಹಂತಕರ ಪತ್ತೆಗೆ ಜಾಲ ಬೀಸಿದ್ದಾರೆ. ಅದೆನೇ ಇರಲಿ ದೇವರ ಹೆಸರಿನ ಮೇಲೆ ಭವಿಷ್ಯ ಹೇಳ್ತಿದ್ದ ರತ್ನಾಬಾಯಿ, ತನ್ನ ಭವಿಷ್ಯ ಹಿಗೇ ಅಂತ್ಯವಾಗುತ್ತೆ ಅನ್ನೊದು ತಿಳಿಯದೇ ಇರೋದು ದುರಂತವೇ ಸರಿ.

ಹಂತಕರ ಬಂಧನದ ನಂತರವೇ ರತ್ನಾಬಾಯಿ ಹತ್ಯೆಗೆ ಕಾರಣ ಏನು ಅನ್ನೊದು ತಿಳಿಯಲಿದೆ‌.ಆ ವೃದ್ದೆ ದೇವರ ಹೆಸರಿನ ಮೇಲೆ ಭವಿಷ್ಯ ಹೇಳ್ತಾ ಜನರ ಕಷ್ಟಕಾರ್ಪಣ್ಯಗಳನ್ನ ದೂರ ಮಾಡುತ್ತ ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದಳು. ಆದರೆ ತನ್ನ ಭವಿಷ್ಯದ ಬಗ್ಗೆನೇ ತಿಳಿಯದೇ ಆಕೆ ಬರ್ಬರವಾಗಿ ಹತ್ಯೆಯಾಗಿ ಹೋಗಿದ್ದಾಳೆ.. ಮನೆಗೆ ನುಗ್ಗಿದ ಹಂತಕರ ತಂಡ ಒಂಟಿ ವೃದ್ದೆಯನ್ನ ಭೀಕರವಾಗಿ ಕೊಂದು ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾರೆ.

ಬರ್ಬರವಾಗಿ ಹತ್ಯೆಯಾಗಿ ಬಿದ್ದಿರೋ ವೃದ್ದೆ.. ಪೊಲೀಸರಿಂದ ಸ್ಥಳ ಪರಿಶೀಲನೆ.. ಮತ್ತೊಂದೆಡೆ ತಮ್ಮವರನ್ನ ಕಳೆದುಕೊಂಡು ರೋಧಿಸುತ್ತಿರೋ ಕುಟುಂಬಸ್ಥರು.. ಅಷ್ಟಕ್ಕೂ ಈ ದೃಶ್ಯಗಳು ಕಂಡು ಬಂದಿದ್ದು ಕಲಬುರಗಿ ನಗರದಲ್ಲಿ.

ಮೇಲಿನ ಫೋಟೊದಲ್ಲಿ ಕಾಣ್ತಾಯಿರೋ ವೃದ್ದೆಯ ಹೆಸರು 65 ವರ್ಷದ ರತ್ನಾಬಾಯಿ ಅಂತ. ಕಲಬುರಗಿಯ ಬಿದನೂರ್ ಗ್ರಾಮದ ನಿವಾಸಿಯಾದ ರತ್ನಾಬಾಯಿ ಕಳೆದ 30 ವರ್ಷಗಳಿಂದ ನಗರದ ಸಂತೋಷ್ ಕಾಲೋನಿಯಲ್ಲಿ ಟಿನ್‌ಶೆಡ್‌ನಲ್ಲಿ ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದಳು.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ