Breaking News

ಅಕ್ರಮ ಮರಳು ದಂಧೆಕೋರರ ಅಟ್ಟಹಾಸ: ಕಂದಾಯ ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ

Spread the love

ಶಹದೋಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಕೋರರು ಅಟ್ಟಹಾಸ ಮೆರೆದಿದ್ದಾರೆ.

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ತಡೆಯಲು ಹೋದ ಕಂದಾಯ ಇಲಾಖೆಯ ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಲಾಗಿದೆ. ಪ್ರಸನ್ನ ಸಿಂಗ್​ (45) ಎಂಬುವವರೇ ಹತ್ಯೆಗೀಡಾದ ಅಧಿಕಾರಿ ಎಂದು ಎಂದು ಗುರುತಿಸಲಾಗಿದೆ.

ಇಲ್ಲಿನ ಗೋಪಾಲ್‌ಪುರ ಪ್ರದೇಶದ ಸೋನ್ ನದಿಯ ಶನಿವಾರ ಮಧ್ಯರಾತ್ರಿ ನಡೆದ ಈ ಘಟನೆ ನಡೆದಿದೆ. ಕಂದಾಯ ಇಲಾಖೆಯಲ್ಲಿ ಪಟ್ವಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಸಿಂಗ್ ಸೇರಿದಂತೆ ಸರ್ಕಾರಿ ನೌಕರರ ಗಸ್ತು ತಂಡವು ಅಕ್ರಮವಾಗಿ ಗಣಿಗಾರಿಕೆ ಮಾಡಿದ ಮರಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ತಡೆದಿತ್ತು. ಈ ವೇಳೆ, ಚಾಲಕನು ಅಧಿಕಾರಿ ಮೇಲೆಯೇ ಟ್ರಾಕ್ಟರ್​ ಚಲಾಯಿಸಿದ್ದಾನೆ. ಇದರ ಪರಿಣಾಮ ಅಧಿಕಾರಿ ಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ, ಆರೋಪಿ ಚಾಲಕ ಟ್ರ್ಯಾಕ್ಟರ್ ಮತ್ತು ಟ್ರಾಲಿ ಸಮೇತ ಪರಾರಿಯಾಗಿದ್ದಾನೆ ಎಂದು ಡಿಯೋಲಂಡ್ ಪೊಲೀಸ್ ಠಾಣೆಯ ಉಸ್ತುವಾರಿ ರಾಜ್‌ಕುಮಾರ್ ಮಿಶ್ರಾ ತಿಳಿಸಿದ್ದಾರೆ.ಹತ್ಯೆಗೀಡಾದ ಪ್ರಸನ್ನ ಸಿಂಗ್ ಬೋಹಾರಿ ತಹಸೀಲ್‌ನ ಖಡ್ಡಾ ಗ್ರಾಮದಲ್ಲಿ ಪಟ್ವಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹರಿಸಿದ ಚಾಲಕನನ್ನು ಮೈಹಾರ್ ಜಿಲ್ಲೆಯ ನಿವಾಸಿ, 25 ವರ್ಷದ ಶುಭಂ ವಿಶ್ವಕರ್ಮ ಎಂದು ಗುರುತಿಸಲಾಗಿದೆ. ಈಗಾಗಲೇ, ಪೊಲೀಸರು ಕಾರ್ಯಾಚರಣೆ ನಡೆಸಿದ ಆರೋಪಿಯನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಆನಂದ್ ನಗರದಲ್ಲಿ ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎನ್.ಸಿ.ಡಿ.ಎಫ್.ಐ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ