Breaking News

ಹೆಂಡತಿಗೆ ಚಾಕು ಇರಿದು ಆತ್ಮಹತ್ಯೆಗೆ ಶರಣಾದ ಗಂಡ

Spread the love

ಮೈಸೂರು : ಪ್ರೀತಿಸಿ ಮದುವೆಯಾದ ಜೋಡಿಯೊಂದರ ಸಂಸಾರದಲ್ಲಿ ಅನುಮಾನ ಎಂಬ ಭೂತ ಜೀವಗಳನ್ನೇ ಬಲಿಪಡೆದಿದೆ.

ಗಂಡ ಹೆಂಡತಿಗೆ ಚಾಕುವಿನಿಂದ ಇರಿದು, ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ.

ಹೀಗೆ ಹೆಂಡತಿಯ ಮೇಲೆ ಅನುಮಾನದಿಂದ ಆಕೆಗೆ ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪ್ರಸನ್ನ ಎಂದು ಗುರುತಿಸಲಾಗಿದೆ. ಚಾಕು ಇರಿತಕ್ಕೆ ಒಳಗಾದವರು ಶ್ವೇತಾ ಎಂಬುದಾಗಿ ತಿಳಿದು ಬಂದಿದೆ. ಇವರಿಬ್ಬರು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದವರು. ಇವರು ಒಂದೇ ಗ್ರಾಮದವರಾಗಿದ್ದಾರೆ. ಒಂದೂವರೆ ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ಸ್ವಲ್ಪ ದಿನಗಳ ನಂತರ ಇವರಿಬ್ಬರ ಸಂಸಾರದಲ್ಲಿ ಅನುಮಾನ ಹೆಚ್ಚಾಗಿ, ಸಾಮರಸ್ಯ ಇಲ್ಲದ ಕಾರಣ ಇಬ್ಬರು ಬೇರೆ ಬೇರೆಯಾಗಿ ವಾಸಮಾಡುತ್ತಿದ್ದರು.

ಹೆಂಡತಿ ಶ್ವೇತಾ ಮೇಲೆ ಗಂಡ ಪ್ರಸನ್ನ ಸಂಶಯಪಡಲು ಪ್ರಾರಂಭಿಸಿದ್ದಾರೆ. ಇದರಿಂದ ಇಂದು ಗ್ರಾಮದಲ್ಲೇ ಹೆಂಡತಿಗೆ ಚಾಕುವಿನಿಂದ ಮನ ಬಂದಂತೆ ಇರಿದಿದ್ದಾರೆ. ನಂತರ ಅವರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಂಡತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಡ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬೈಲಕುಪ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ