Breaking News

ಅಧಿವೇಶನದ ಹಿನ್ನೆಲೆ ಪ್ರತಿಭಟನೆ: ಟೆಂಟ್ ಪಕ್ಕದ ರೈತರ ಗೋಳು ಕೇಳುವರ್ಯಾರು?

Spread the love

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಯಿತು ಎಂದರೆ ಸಾಕು ಪ್ರತಿಭಟನೆಗಳ ಪರ್ವ ಆರಂಭವಾಗುತ್ತದೆ. ಇನ್ನು ಪ್ರತಿಭಟನಾ ಟೆಂಟ್​ಗಳ ಪಕ್ಕದ ಹೊಲಗಳಲ್ಲಿ ಜನರ ಓಡಾಟದಿಂದ ಅವರು ಬೆಳೆದಿದ್ದ ಬೆಳೆಗಳು ಹಾಳಾಗುವ ಆತಂಕ ಕಾಡುತ್ತಿದೆ.

ಹೌದು ಪ್ರತಿವರ್ಷವೂ ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿಯ ಹಲಗಾ, ಬಸ್ತವಾಡ, ಕೊಂಡಸಕೊಪ್ಪ ಗ್ರಾಮಗಳ ರೈತರಿಗೆ ಈ ಗೋಳು ತಪ್ಪಿದ್ದಲ್ಲ. ಈ ಭಾರಿ ಅಧಿವೇಶನ ಹಿನ್ನೆಲೆ ಎರಡು ಕಡೆ ಪ್ರತಿಭಟನಾ ಟೆಂಟ್​​​ ಹಾಕಲಾಗಿದ್ದು, ಒಂದು ಹಲಗಾ ಸುವರ್ಣ ಗಾರ್ಡನ್​, ಮತ್ತೊಂದು ಕೊಂಡಸಕೊಪ್ಪ ಗುಡ್ಡದಲ್ಲಿ ಪ್ರತಿಭಟನಾಕಾರರಿಗೆ ವ್ಯವಸ್ಥೆ ಮಾಡಲಾಗಿದೆ. ಟೆಂಟ್​ಗೆ ಭೂಮಿ ಕೊಟ್ಟಿರುವ ರೈತರಿಗೆ 1 ಗುಂಟೆಗೆ 3 ಸಾವಿರ ರೂ. ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಆದರೆ, ಟೆಂಟ್ ಪಕ್ಕದ ಜಮೀನುಗಳ ಬೆಳೆ ಹಾನಿಗೆ ಇನ್ನು ಪರಿಹಾರದ ಮೊತ್ತ ನಿಗದಿಪಡಿಸಿಲ್ಲ.

ಹಲಗಾ ಟೆಂಟ್ ಪಕ್ಕದ ರೈತ ಬಾಳಪ್ಪ ದೇವಪ್ಪ ಚಿಕ್ಕಪರಪ್ಪ ಅವರು ತಮ್ಮ ಒಂದು ಎಕರೆ ಜಮೀನಿನಲ್ಲಿ ಜೋಳ, ಚನ್ನಂಗಿ ಬೆಳೆದಿದ್ದಾರೆ. ಈಗ ಅಧಿವೇಶನ ಶುರುವಾಗಿದ್ದರಿಂದ ಬೆಳೆ ಹಾನಿ ಭೀತಿಯಲ್ಲಿದ್ದಾರೆ. ಜಿಲ್ಲಾಡಳಿತ ಏನೋ ಬೆಳೆ ಹಾನಿಗೆ ಪರಿಹಾರ ನೀಡುವ ಭರವಸೆ ನೀಡಿದೆ. ಆದರೆ, ಅವರು ನೀಡುವ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ. ಹೆಚ್ಚಿನ ಪರಿಹಾರ ನೀಡುವಂತೆ ಇಲ್ಲಿನ ರೈತರು ಒತ್ತಾಯಿಸಿದ್ದಾರೆ.

ಇನ್ನು ಧರಣಿಯಲ್ಲಿ ಭಾಗಿಯಾಗಲು ಆಗಮಿಸುವ ಜನರು ನೀರಿನ ಬಾಟಲ್, ಪ್ಲಾಸ್ಟಿಕ್ ಸೇರಿ ಮತ್ತಿತರ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಕುವುದರಿಂದ ಅಧಿವೇಶನ ಮುಗಿದ ಬಳಿಕ ತಮ್ಮ ಹೊಲ ಸ್ವಚ್ಛಗೊಳಿಸಲು 15 ದಿನ ಬೇಕಾಗುತ್ತದೆ


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ