Breaking News

ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ ಕೇಸ್: ಹನೂರಿನ ರಾಮಪುರದಲ್ಲಿ ಕಾರು ಪತ್ತೆ

Spread the love

ಚಾಮರಾಜನಗರ: ಚನ್ನಪಟ್ಟಣ ತಾಲೂಕಿನ ಚಕ್ಕರೆ ಗ್ರಾಮದ ತೋಟದ ಮನೆಯಿಂದ ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ಸಂಬಂಧಿಯ ಕಾರು ಹನೂರು ತಾಲೂಕಿನ ರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ದೊರೆತಿದೆ.

ಯೋಗೇಶ್ವರ್ ಅವರ ಭಾವ ಚಕ್ಕರೆ ಗ್ರಾಮದ ಮಹದೇವಯ್ಯ ಮೂರು ದಿನಗಳ ಹಿಂದೆ ಬಿಳಿ ಬಣ್ಣದ ಬ್ರಿಜಾ ಕಾರುಸಮೇತ (KA-42 N0012) ಕಾಣೆಯಾಗಿದ್ದರು. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶನಿವಾರ ಬೆಳಿಗ್ಗೆ ಮೊಬೈಲ್ ಟವರ್ ಲೊಕೇಶನ್​​ನಲ್ಲಿ ಪರಿಶೀಲನೆ ನಡೆಸಿದಾಗ ಮಲೆಮಹದೇಶ್ವರ ಬೆಟ್ಟದ ಸುತ್ತಮುತ್ತ ಇರುವುದಾಗಿ ತಿಳಿದು ಬಂದಿತ್ತು. ಇದೀಗ ರಾಮಪುರ ಪೊಲೀಸ್ ಠಾಣೆ ಸಮೀಪದ ರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಕಾರು ಪತ್ತೆಯಾಗಿದೆ.

ಈಗಾಗಲೇ ರಾಮಪುರ ಪೊಲೀಸರು ಪರಿಶೀಲನೆ ನಡೆಸಿದ್ದು, ಕಾರು ಮಾತ್ರ ಆಸ್ಪತ್ರೆಯ ಮುಂಭಾಗ ನಿಂತಿದೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮಹದೇವಯ್ಯ ಬಗ್ಗೆ ಮಾಹಿತಿ ಸಿಕ್ಕಿಲ್ಲ. ತನಿಖೆ ಮುಂದುವರೆದಿದೆ.

ರಾಮನಗರ ಎಸ್​ಪಿ ಪ್ರತಿಕ್ರಿಯೆ: ಮಹದೇವಯ್ಯ ನಾಪತ್ತೆಯಾಗಿರುವ ಬಗ್ಗೆ ಅವರ ಮಗ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಾಲ್ಕು ತಂಡಗಳನ್ನು ರಚಿಸಿ ಹುಡುಕಾಟ ನಡೆಸಿದ್ದೇವೆ. ಸದ್ಯ ಅವರು ಬಳಸುತ್ತಿದ್ದ ಬ್ರೀಜಾ ಕಾರು ಚಾಮರಾಜನಗರದಲ್ಲಿ ಪತ್ತೆಯಾಗಿದೆ. ತನಿಖೆ ಮುಂದುವರಿದಿದೆ ಎಂದು ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ