Breaking News

ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ವಿಧೇಯಕ ಸೇರಿ 3 ವಿಧೇಯಕ ಮಂಡನೆ

Spread the love

ಬೆಳಗಾವಿ: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ ಸೇರಿದಂತೆ ಮೂರು ವಿಧೇಯಕಗಳನ್ನು ವಿಧಾನಸಭೆ ಕಲಾಪದಲ್ಲಿ ಮಂಡಿಸಲಾಯಿತು.

 

ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ, ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲಾಯಿತು. ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕವನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಗ್ರಾಮೀಣಾವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ಕರಾವಳಿ ಅಭಿವೃದ್ಧಿ ಮಂಡಳಿಯನ್ನು ಯೋಜನೆ ಸಚಿವ ಡಿ. ಸುಧಾಕರ್ ಪರವಾಗಿ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಮಂಡಿಸಿದರು.

ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ: ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕದ ಮೂಲಕ ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆಗೆ ಆಯ್ಕೆಯಾದ ವೈದ್ಯಕೀಯ ಅಭ್ಯರ್ಥಿಗಳಿಗೆ ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ ನೀಡಲಿದೆ. ವೈದ್ಯಕೀಯ ಕೋರ್ಸ್‌ ಪೂರ್ಣಗೊಳಿಸಿದ ಬಳಿಕ ಒಂದು ವರ್ಷ ಕಡ್ಡಾಯವಾಗಿ ಗ್ರಾಮೀಣ ಸೇವೆ ಮಾಡಬೇಕಿತ್ತು. ಈ ವಿಧೇಯದಿಂದಾಗಿ ಇದಕ್ಕೆ ವಿನಾಯಿತಿ ನೀಡಲಾಗಿದೆ.ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ ಪೂರ್ಣಗೊಳಿಸಿದ ವಿದ್ಯಾಥಿಗಳು ಒಂದು ವರ್ಷಗಳ ಕಾಲ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಬೇಕು. ಅವರನ್ನು ಸೀನಿಯರ್‌ ರೆಸಿಡೆಂಟ್‌ ಎಂದು ಗುರುತಿಸಿ, ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ತಜ್ಞ ವೈದ್ಯ ಕನಿಷ್ಠ ಸಂಬಳಕ್ಕಿಂತ ನೂರು ರೂ. ಕಡಿಮೆಗೆ ಸಮನಾಗಿ ವೃತ್ತಿ ವೇತನ ನೀಡಬೇಕು ಎಂದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ