Breaking News

ನಾನು ಸಿಎಂ ಸಿದ್ದರಾಮಯ್ಯ ವಕ್ತಾರನಲ್ಲ’: ಬಿ.ಕೆ. ಹರಿಪ್ರಸಾದ್​

Spread the love

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರ ‘ಮುಸ್ಲಿಂ ಸಮುದಾಯಕ್ಕೆ ಅನುದಾನ ನೀಡುವ ವಿಚಾರ’ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಕಾಂಗ್ರೆಸ್​ ನಾಯಕ ಬಿ ಕೆ ಹರಿಪ್ರಸಾದ್​ ನಿರಾಕರಿಸಿದ್ದಾರೆ. ಸಿದ್ದರಾಮಯ್ಯ ಅವರು ಅನುಭವಿಗಳು, ಈ ಬಗ್ಗೆ ಅವರನ್ನೇ ಕೇಳಿ. ನಾನು ಅವರ ವಕ್ತಾರ ಅಲ್ಲ ಎಂದು ಹೇಳಿದ್ದಾರೆ. ಮತ್ತೊಂದೆಡೆ ಸಿಎಂ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಸಚಿವ ದಿನೇಶ್​ ಗುಂಡೂರಾವ್​ ಮರು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಮುಸ್ಲಿಮರಿಗೆ ಅನುದಾನ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ನಾನು ಸಿದ್ದರಾಮಯ್ಯ ವಕ್ತಾರನಲ್ಲ. ಅವರಿಗೆ ಬಹಳ ಅನುಭವ ಇದೆ. ಹೆಚ್ಚಿನ ಮಾಹಿತಿಯೂ ಅವರಿಗಿರುತ್ತೆ. ಅದಕ್ಕೆ ಅವರನ್ನೇ ಕೇಳೋದ್​ ಒಳ್ಳೆಯದು. ಅದಕ್ಕೆ ನಾನು ಉತ್ತರ ಕೊಡಲ್ಲ ಎಂದು ಹೇಳಿದರು.

ಪಕ್ಷದಲ್ಲಿ ಎಲ್ಲವೂ ಚೆನ್ನಾಗಿದೆ. ನಾವೂ ಚೆನ್ನಾಗಿದೀವಿ ಎಂದು ಹರಿಪ್ರಸಾದ್​ ಇದೇ ವೇಳೆ ಸ್ಪಷ್ಟನೆಯನ್ನೂ ನೀಡಿದರು.

ಸಾಮಾಜಿಕ ನ್ಯಾಯ ಪರಿಕಲ್ಪನೆಯ ಹೇಳಿಕೆ – ಗುಂಡೂರಾವ್: ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂ ಅನುದಾನ ಹಂಚಿಕೆ ಹೇಳಿಕೆ ನೀಡಿದ್ದಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿ ಯಾಕೆ ಇಷ್ಟೊಂದು ಗಾಬರಿಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಪ್ರಶ್ನಿಸಿದರು.

ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಸಿಎಂ ಹೇಳಿಕೆ ನೀಡಿದ್ದಾರೆ. ಸರ್ವರಿಗೂ ಸಮಬಾಳು ಸಮಪಾಲು ಎಂಬುವಂತ ರೀತಿಯಲ್ಲಿ ಹೇಳಿದ್ದಾರೆ. ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಯಾವ ಸಮಾವೇಶದಲ್ಲಿ ಹೇಳಿದ್ದಾರೆ ಅನ್ನೋದು ಮುಖ್ಯ. ಮುಸ್ಲಿಂ ಸಮಾವೇಶದಲ್ಲಿ ಅವರಿಗಾಗಿ ಏನು ಮಾಡುತ್ತೇವೆ ಅನ್ನೋದನ್ನು ಹೇಳಬೇಕಾಗುತ್ತದೆ. ಬೇರೆ ಸಮುದಾಯದ ಸಮಾವೇಶದಲ್ಲಿ ಅವರಿಗೆ ಏನು ಮಾಡುತ್ತೇವೆ ಅಂತ ವಿವರಿಸಬೇಕಾಗುತ್ತದೆ. ಇದರಲ್ಲಿ ತಪ್ಪು ಹುಡುಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ