Breaking News

ಕಾಂಗ್ರೆಸ್ ಸರ್ಕಾರದ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Spread the love

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್​​ನಲ್ಲಿ ಇಂದು ಪ್ರತಿಭಟನೆ ನಡೆಸಿದರು. ದಲಿತರಿಗೆ ಮೀಸಲಿಟ್ಟ ಅನುದಾನ ನಮ್ಮ ಮಕ್ಕಳ ಶಿಕ್ಷಣ, ಸಮಾಜದ ಅಭಿವೃದ್ಧಿಗೆ ಮೀಸಲಿಡಬೇಕು. ನಮಗೆ ಮೀಸಲಿದ್ದ ಅನುದಾನ ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿರುವುದು ಸರಿಯಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಖಾನಾಪುರ ತಾಲ್ಲೂಕಿನ ಪ್ರಭುನಗರ ಜನತಾ ಪ್ಲಾಟ್‌ನ 80 ಕುಟುಂಬಗಳಿಗೆ ಸೇರಿದ ಜಮೀನು ಖಾಸಗಿಯವರಿಗೆ ವರ್ಗಾವಣೆ ಮಾಡಲಾಗಿದೆ. ಕಳೆದ 40 ವರ್ಷಗಳಿಂದ ಇಲ್ಲಿ ಈ ಕುಟುಂಬಗಳು ಮನೆ ಕಟ್ಟಿಕೊಂಡು ವಾಸವಾಗಿದ್ದು, ಈ 80 ಕುಟುಂಬಗಳಿಗೆ ಇ-ಸ್ವತ್ತು ಒದಗಿಸಬೇಕು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿರುವ ಕಿತ್ತೂರು, ಖಾನಾಪುರ ವಿಧಾನಸಭಾ ಕ್ಷೇತ್ರವನ್ನು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸೇರಿಸಬೇಕು. ಉತ್ತರ ಕನ್ನಡ ಸಂಸದರು ಕೇವಲ ಮತ ಕೇಳಲು ಮಾತ್ರ ಬರುತ್ತಾರೆ. ಆಮೇಲೆ ಬರೋದೇ ಇಲ್ಲ. ಹೀಗಾಗಿ ಬೆಳಗಾವಿ ಜಿಲ್ಲೆಯ ಕಿತ್ತೂರು, ಖಾನಾಪುರ ಎರಡೂ ಕ್ಷೇತ್ರ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಸೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಪ್ರಧಾ‌ನ ಕಾರ್ಯದರ್ಶಿ ಪರಶುರಾಮ ಮಾದರ ಮಾತನಾಡಿ, ಉತ್ತರಕರ್ನಾಟಕ ಅಭಿವೃದ್ಧಿ ಗುರಿ ಇಟ್ಟುಕೊಂಡು ಬೆಳಗಾವಿಯ ಸುವರ್ಣ‌ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸಲಾಗುತ್ತದೆ. ಆದರೆ, ಅಧಿವೇಶನ ಮುಗಿದ ಬಳಿಕ ಅಭಿವೃದ್ಧಿ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಕಳೆದ ಅಧಿವೇಶನದಲ್ಲೂ ಹತ್ತು ಹಲವಾರು ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದ್ದೆವು. ಅದರಲ್ಲಿ ಯಾವ ಸಮಸ್ಯೆಯೂ ಬಗೆಹರಿದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ