Breaking News

ನಮ್ಮ ಕ್ಷೇತ್ರಕ್ಕೆ ಯಾವುದೇ ಅನ್ಯಾಯ ಆಗಿಲ್ಲ ನಂಬಿ ಬಿಜೆಪಿಗೆ ಬಂದಿದ್ದೇವೆ,  ಸಾಯುವವರೆಗೂ ಬಿಜೆಪಿ ಬಿಡಲ್ಲ

Spread the love

ಬೆಂಗಳೂರು: ಪ್ರಧಾನಿ ಮೋದಿ, ಅಮಿತ್ ಶಾ, ಯಡಿಯೂರಪ್ಪ ಅವರನ್ನು ನಂಬಿ ಬಿಜೆಪಿಗೆ ಬಂದಿದ್ದೇವೆ,  ಸಾಯುವವರೆಗೂ ಬಿಜೆಪಿ ಬಿಡಲ್ಲ ಅಂತಾ ಅಥಣಿ ಶಾಸಕ ಮಹೇಶ ಕುಮಟಳ್ಳಿ ಹೇಳಿದ್ದಾರೆ.

ಉಮೇಶ ಕತ್ತಿ ನಿವಾಸದಲ್ಲಿ ಬಿಜೆಪಿ ಶಾಸಕರು ಸಭೆ ನಡೆಸಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು,
ಯಾರು ಸಭೆ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ, ನಾವಂತೂ ಸಭೆಗೆ ಹೋಗಿಲ್ಲ. ಯಾರು ಸಭೆಗೆ ಹೋಗಿದ್ದರು ಎಂಬುದು ಗೊತ್ತಿಲ್ಲ. ಈ ಬಗ್ಗೆ ನಾನು ಹೇಳಿಕೆ ಕೊಡೋದು ಸರಿಯಲ್ಲ. ನಾವು ಮುಖ್ಯಮಂತ್ರಿಗಳ  ಜತೆ ಇದ್ದೇವೆ. ಮುಂದೆ ಕೂಡ ಅವರ ಜೊತೆ ಇರುತ್ತೇವೆ.

ರಾಜಕೀಯ ವಿದ್ಯಮಾನದಲ್ಲಿ ನಾವು ರಾಜೀನಾಮೆ ಕೊಟ್ಟಿದ್ದೇವೆ. ಪದೇ ಪದೇ ರಾಜೀನಾಮೆ ಕೊಡುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡುವುದಿಲ್ಲ ಅಂತ ಸ್ಪಷ್ಟಪಡಿಸಿದ್ರು.

ನಮ್ಮ ಕ್ಷೇತ್ರಕ್ಕೆ ಯಾವುದೇ ಅನ್ಯಾಯ ಆಗಿಲ್ಲ. ಯತ್ನಾಳ್ ಅವ್ರ ಕ್ಷೇತ್ರಕ್ಕೆ ಅನ್ಯಾಯ ಆಗಿದ್ರೆ ಹೈಕಮಾಂಡ್ ಜೊತೆ ಮಾತನಾಡಲಿ ಎಂದರು.


Spread the love

About Laxminews 24x7

Check Also

ಮಗಳು ಬರ್ಬೇಡ ಅಂತಾಳೆ,ಮಗ-ಸೊಸೆ‌ ಹಿಂಸೆ‌ ನೀಡ್ತಾರೆ,ಕೃಷ್ಣಾ ನದಿಗೆ ಹಾರಲು ಯತ್ನಿಸಿದ್ದ ವೃಧ್ದನ ಕಣ್ಣೀರ ಕಥೆ

Spread the love ಮಗಳು ಬರ್ಬೇಡ ಅಂತಾಳೆ,ಮಗ-ಸೊಸೆ‌ ಹಿಂಸೆ‌ ನೀಡ್ತಾರೆ,ಕೃಷ್ಣಾ ನದಿಗೆ ಹಾರಲು ಯತ್ನಿಸಿದ್ದ ವೃಧ್ದನ ಕಣ್ಣೀರ ಕಥೆ ಚಿಕ್ಕೋಡಿ:ಕೃಷ್ಣಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ