Breaking News

ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಿನ್ನೆ ಉಮೇಶ ಕತ್ತಿ ನಿವಾಸದಲ್ಲಿ ನಡೆದಿದೆ ಎನ್ನಲಾದ ಅತೃಪ್ತ ಶಾಸಕರ ಸಭೆಯಲ್ಲಿ ಭಾಗವಹಿಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ

Spread the love

ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಿನ್ನೆ ಉಮೇಶ ಕತ್ತಿ ನಿವಾಸದಲ್ಲಿ ನಡೆದಿದೆ ಎನ್ನಲಾದ ಅತೃಪ್ತ ಶಾಸಕರ ಸಭೆಯಲ್ಲಿ ಭಾಗವಹಿಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ನಿನ್ನೆ ಉಮೇಶ್​ ಕತ್ತಿ ನಿವಾಸದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ಶಾಸಕರು ಸಭೆ ನಡೆಸಿದ್ದಾರೆ. ಶಿವರಾಜ್ ಪಾಟೀಲ್, ರಾಜುಗೌಡ ನಾಯಕ್, ದತ್ತಾತ್ರೇಯ ಪಾಟೀಲ್ ರೇವೂರ್, ರಾಜಕುಮಾರ್ ಪಾಟೀಲ್ ಸೇಡಂ, ಸುಭಾಷ್ ಗುತ್ತೇದಾರ್, ಬಸವರಾಜ ಮತ್ತಿಮೊಡ್, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್, ಸೋಮಲಿಂಗಪ್ಪ, ಗೂಳಿಹಟ್ಟಿ ಶೇಖರ್, ಮಹದೇವಪ್ಪ ಯಾದವಾಡ ಅತೃಪ್ತರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಈಗ ಸಭೆಯಲ್ಲಿ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.

ಲೋಕಸಭಾ ಟಿಕೆಟ್ ಕೈ ತಪ್ಪಿದ ಉಮೇಶ ಕತ್ತಿ ಸಹೋದರ ರಮೇಶ‌ ಕತ್ತಿಗೆ ರಾಜ್ಯಸಭೆ ಟಿಕೆಟ್ ಗಾಗಿ ಯಡಿಯೂರಪ್ಪ ಭರವಸೆ ನೀಡಿದ್ದರು ಎನ್ನಲಾಗಿದೆ


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ