Breaking News

ಮುಂದಿನ ವರ್ಷದಿಂದ ಉಚಿತ ಸೈಕಲ್​ ನೀಡಲಾಗುವುದು : ಮಧು ಬಂಗಾರಪ್ಪ

Spread the love

ಬೆಳಗಾವಿ: ರಾಜ್ಯದ ಪ್ರಾಥಮಿಕ ಹಾಗು ಪ್ರೌಢಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ಯೋಜನೆಯಡಿ ಮುಂದಿನ ವರ್ಷದಿಂದ ಸೈಕಲ್ ವಿತರಣೆ ಆರಂಭಿಸಲಾಗುತ್ತದೆ.

ಆದರೆ, ಈ ಬಾರಿ ಸೈಕಲ್ ವಿತರಣೆ ಅಸಾಧ್ಯ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಕ್ಕಳಿಗೆ ಸೈಕಲ್ ಕೊಡಬಾರದಂತಲ್ಲ, ಇದಕ್ಕೆ ನಮಗೆ ಹಣಕಾಸು ಸಮಸ್ಯೆಯೂ ಆಗುವುದಿಲ್ಲ. ಆದರೆ, ಒಂದೇ ಬಾರಿ ಅಷ್ಟು ಸೈಕಲ್​ಗಳ ಉತ್ಪಾದನೆ ಕಷ್ಟವಾಗಲಿದೆ. ಹಾಗಾಗಿ ಈ ಬಾರಿ ಮೊಟ್ಟೆ ವಿತರಣೆಗೆ ಆದ್ಯತೆ ನೀಡಲಾಗುತ್ತದೆ. ನಾವು ಬೇಡಿ ನೀಡಿದ ಕಡೆಯಲ್ಲೆಲ್ಲಾ ಮಕ್ಕಳು ಸೈಕಲ್ ಕೇಳಿದ್ದಾರೆ. ಹಣದ ಕೊರತೆ ಆಗಲ್ಲ. ಮುಂದಿನ ವರ್ಷದಿಂದ ಸೈಕಲ್ ಕೊಡಲಿದ್ದೇವೆ ಎಂದು ಭರವಸೆ ನೀಡಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ