Breaking News

ಕಬ್ಬು ಬೆಳೆಗಾರರಿಗೆ ಅವಮಾನ ನಿಮ್ಮನ್ನು ಕಬ್ಬಿನಿಂದ ಹೊಡೆದು ಹಾಕುತ್ತಾರೆ: ಸವದಿ

Spread the love

ಬೆಳಗಾವಿ/ಬೆಂಗಳೂರು: ಶಿವಮೊಗ್ಗದವರು ಉತ್ತರ ಕರ್ನಾಟಕದ ವಿರೋಧಿಗಳು, ಬೆಳಗಾವಿಯ ಕಬ್ಬು ಬೆಳೆಗಾರರಿಗೆ ನೀವು ಅವಮಾನ ಮಾಡಿತ್ತಿದ್ದೀರಿ. ನೀವು ಹೊರಗೆ ಹೋದರೆ ನಿಮ್ಮನ್ನು ಕಬ್ಬಿನಿಂದಲೇ ಹೊಡೆದು ಹಾಕುತ್ತಾರೆ ಎಂದು ಬೆಳಗಾವಿ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್​​​ ಶಾಸಕ ಲಕ್ಷ್ಮಣ್‌ ಸವದಿ ವಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ಸೋಮವಾರ ಅಧಿವೇಶನದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ ಆರಂಭಿಸಿದಾಗ ಬಿಜೆಪಿ ಸದಸ್ಯರು ಅಡ್ಡಿಪಡಿಸಿದರು. ಸದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದ ಬಿಜೆಪಿ ಶಾಸಕರ ಪೈಕಿ ಶಿವಮೊಗ್ಗ ನಗರ ಕ್ಷೇತ್ರದ ಸದಸ್ಯ ಚನ್ನಬಸಪ್ಪ ವಿರುದ್ಧ ಲಕ್ಷ್ಮಣ್‌ ಸವದಿ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದವರು ಉತ್ತರ ಕರ್ನಾಟಕದ ವಿರೋಧಿಗಳು. ಬೆಳಗಾವಿ ಕಬ್ಬು ಬೆಳೆಗಾರರಿಗೆ ಅವಮಾನ ಮಾಡುತ್ತಿದ್ದೀರಿ. ನಿಮ್ಮನ್ನು ಕಬ್ಬಿನಿಂದಲೇ ಹೊಡೆದು ಹಾಕುತ್ತಾರೆ. ನಿಮಗೆ ಮಾನ-ಮಾರ್ಯದೆ ಇದೆಯಾ? ಎಂದು ಕೆಂಡಾಮಂಡಲವಾದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ