Breaking News

ಆಸ್ತಿ ವಿವಾದದ ಕಲಹಕ್ಕೆ ವಿಕಲಚೇತನನ ಮನೆ ಬಲಿ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. 30 ವರ್ಷಗಳಿಂದ ಕುಟುಂಬದೊಂದಿಗೆ ಶೆಡ್​ನಲ್ಲಿ ವಾಸವಿದ್ದ ವಿಕಲಚೇತನನ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಅಟ್ಟಹಾಸ ಮೆರೆದಿರುವ ಆರೋಪ ಗೋಕಾಕ ತಾಲೂಕಿನ ಉದಗಟ್ಟಿ ಗ್ರಾಮದಿಂದ ತಡವಾಗಿ ಬೆಳಕಿಗೆ ಬಂದಿದೆ.

 

ಹಾಡಹಗಲೇ ಬಡಿಗೆ ಕೋಲುಗಳಿಂದ ಮನೆ ಒಡೆದು ಧ್ವಂಸಗೊಳಿಸಲಾಗಿದೆ. ಉದಗಟ್ಟಿ ಗ್ರಾಮದ ಸಿದ್ದಪ್ಪ ಅಪ್ಪಯ್ಯ ತುರಬಿ (44) ವಾಸವಿದ್ದ ಪತ್ರಾಸ್ ಶೆಡ್ ಇದಾಗಿದೆ. ಆಸ್ತಿ ವಿವಾದದ ಕಲಹಕ್ಕೆ ವಿಕಲಚೇತನನ ಮನೆ ಬಲಿಯಾಗಿದೆ ಎಂದು ಸಂತ್ರಸ್ತ ಸಿದ್ದಪ್ಪ ಅಪ್ಪಯ್ಯ ತುರಬಿ ಆರೋಪಿಸಿದ್ದಾರೆ. ಸಿದ್ದಪ್ಪ ತುರಬಿ ವಾಸ ಮಾಡುತ್ತಿದ್ದ ಪತ್ರಾಸ್ ಶೆಡ್ 172 ಸರ್ವೆ ನಂಬರ್​ ಸಂಬಂಧ ಕೋರ್ಟ್​ನಲ್ಲಿ ಕೇಸ್ ದಾಖಲಾಗಿದೆ. ಕೇಸ್​ ಇದ್ದರು ಮನೆಯಲ್ಲಿ ಯಾರು ಇಲ್ಲದಿರುವಾಗ ಮನೆಗೆ ದಾಳಿ ಮಾಡಿ, ಮನೆಯಲ್ಲಿನ ವಸ್ತುಗಳನ್ನು ಹಾಳು ಮಾಡಿದ್ದಾರೆ. ಐದು ದಿನಗಳ ಹಿಂದೆ ಈ ಘಟನೆ ನಡೆದಿದ್ದು ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ದೂರು ದಾಖಲಾದರೂ ಆರೋಪಿಗಳ ಮೇಲೆ ಕ್ರಮಕ್ಕೆ ಪೊಲೀಸರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಉದಗಟ್ಟಿ ಗ್ರಾಮದ ಲಕ್ಷ್ಮಣ ತುರಬಿ, ಸತ್ಯಪ್ಪಾ ತುರಬಿ, ಗಣಪತಿ ತುರಬಿ, ಫಕ್ಕೀರಪ್ಪ ತುರಬಿ ಸೇರಿ 8 ಜನರ ವಿರುದ್ಧ ದೂರು ದಾಖಲಾಗಿದೆ.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ