Breaking News

ನಾನು ಸಿಎಲ್‌ಪಿ ಸಭೆಗೆ ಹೋಗಿಲ್ಲ, ನಾನು ಡಿಸಿಎಂ ಕರೆದ ಭೋಜನಕೂಟಕ್ಕೆ ಹೋಗಿದ್ದೆ

Spread the love

ಬೆಳಗಾವಿ : ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ. ನಾನು ಡಿಸಿಎಂ ಡಿಕೆ ಶಿವಕುಮಾರ್​ ಕರೆದ ಭೋಜನಕೂಟಕ್ಕೆ ಮಾತ್ರ ಹೋಗಿದ್ದು ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಾನು ನಿನ್ನೆ 8 ಗಂಟೆಯಿಂದ 10 ಗಂಟೆ ತನಕ ವಿಜಯೇಂದ್ರ ಜೊತೆಗೆ ಇದ್ದೆ. ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಭೋಜನ ಕೂಟ ಇಟ್ಟುಕೊಂಡಿದ್ದರು. ಅವರ ಇಟ್ಟುಕೊಂಡಿದ್ದ

ಔತಣಕೂಟದಲ್ಲಿ ನಾನು ಭಾಗಿಯಾಗಿ ಊಟ ಮಾಡಿದೆ. ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್​ ಅವರು ಸಹ ನನಗೆ ಊಟಕ್ಕೆ ಆಹ್ವಾನ ಕೊಟ್ಟಿದ್ದರು. ಹೀಗಾಗಿ 11 ಗಂಟೆಗೆ ಡಿಕೆಶಿ ಕರೆದ ಔತಣಕೂಟಕ್ಕೆ ತೆರಳಿ ವಿಷ್​ ಮಾಡಿ ಬಂದೆ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ