Breaking News

ಹಿಂದೂ ಕಾರ್ಯಕರ್ತರ ನೆರವಿಗೆ ಬೆಂಗಳೂರಿನಲ್ಲಿ ಕಚೇರಿ ಆರಂಭ: ಯತ್ನಾಳ್

Spread the love

ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಸಂತ್ರಸ್ತರಿಗೆ ಕಾನೂನು ನೆರವು ನೀಡುವುದಕ್ಕಾಗಿ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಕಛೇರಿ ತೆರೆಯುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದ್ದಾರೆ.

 

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೂ ಪೊಲೀಸರು ಪ್ರಕರಣ ದಾಖಲಿಸುವ, ಠಾಣೆಗೆ ಕರೆದೊಯ್ದು ಮುಚ್ಚಳಿಕೆ ಬರೆಸಿಕೊಳ್ಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯದ ಹರಣ ನಡೆಯುತ್ತಿದೆ. ಇಂಥ ದೌರ್ಜನ್ಯದಿಂದ ಬಾಧಿತರಿಗೆ ಉಚಿತವಾಗಿ ಕಾನೂನು ನೆರವು ನೀಡುವುದಕ್ಕಾಗಿ ಎರಡು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಛೇರಿ ತೆರೆಯುವುದಾಗಿ ಹೇಳಿದರು.

ಸದರಿ ಕೇಂದ್ರದಲ್ಲಿ ಉಚಿತ ಕಾನೂನು ನೆರವು ನೀಡಲು ಹಲವು ವಕೀಲರು ಮುಂದೆ ಬಂದಿದ್ದಾರೆ. ಬಾಧಿತರಿಗೆ ಉಚಿತ ಕಾಲಿಂಗ್ ಸೇವೆ ಆರಂಭಿಸಿ, ಭಯದಿಂದ ಬಳಲಿರುವ ಬಿಜೆಪಿ-ಹಿಂದೂ ಕಾರ್ಯಕರ್ತರಲ್ಲಿ ಧೈರ್ಯ ತುಂಬುವ ಕೆಲಸ ಮಾಡಲಿದ್ದೇನೆ ಎಂದರು.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ