Breaking News

ಎರಡು ವರ್ಷದೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಗೃಹ ಸಚಿವ ಡಾ ಜಿ ಪರಮೇಶ್ವರ್

Spread the love

ಬೆಂಗಳೂರು : ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

 

ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಎತ್ತಿನ ಹೊಳೆ ಯೋಜನೆ ಬಗ್ಗೆ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆಗೆ ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ನಮ್ಮ ಸರ್ಕಾರವು ಅನುದಾನ ಬಿಡುಗಡೆ ಮಾಡಿದೆ. ಯೋಜನೆಯ ಅಂದಾಜು ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ 22 ಸಾವಿರ ಕೋಟಿ ರೂ. ಆಗುತ್ತಿದೆ. ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ತಿಳಿಸಿದರು.

ವಾಟರ್ ಸ್ಟೋರೆಜ್‌ಗಾಗಿ ಕೊರಟಗೆರೆ ರೈತರು ನೀಡಿರುವ ಭೂಮಿಗೆ ಎಕರೆಗೆ 8 ಲಕ್ಷ ರೂ ಹಾಗೂ ದೊಡ್ಡಬಳ್ಳಾಪುರದಲ್ಲಿ ಎಕರೆ ಭೂಮಿಗೆ 32 ಲಕ್ಷ ರೂ. ಪರಿಹಾರ ನಿಗದಿಪಡಿಸಲಾಗಿದೆ. ಎಲ್ಲ ರೈತರಿಗೂ ಒಂದೇ ರೀತಿಯ ಸಮಾನ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗಿದೆ ಎಂದರು.

ಎನ್‌ಐಎ ದಾಳಿ : ಎನ್‌ಐಎ ಕಚೇರಿ ಬೆಂಗಳೂರಿನಲ್ಲಿ ಆಗಿದೆ. ಅಕ್ರಮ ಚಟುವಟಿಕೆಗಳ‌ ಬಗ್ಗೆ ಮಾಹಿತಿ ಆಧರಿಸಿ ದಾಳಿ ಮಾಡುತ್ತಿರುತ್ತಾರೆ. ಈ ಬಗ್ಗೆ ಎನ್‌ಐಎ ತಂಡವು ಕೆಲವು ಸಲ ರಾಜ್ಯ ಪೊಲೀಸರೊಂದಿಗೆ ಮಾಹಿತಿ ಹಂಚಿಕೊಳ್ಳುತ್ತಾರೆ. ಅವರ ಕರ್ತವ್ಯ ಅವರು ಮಾಡಲಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ