Breaking News

ಕನ್ನಡ ಧ್ವಜ ಹಾಕಿದ್ದಕ್ಕೆ ದುಷ್ಕರ್ಮಿಗಳು ಯುವಕರಿಗೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Spread the love

ಚಿಕ್ಕೋಡಿ(ಬೆಳಗಾವಿ): ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಇಬ್ಬರು ಯುವಕರಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ.

ಹಲ್ಲೆ ನಡೆಸಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಂಕಲಿ ಗ್ರಾಮದ ಬಸವರಾಜ ಪಾಟೀಲ, ಹಾಗೂ ಶುಭಂ ಕಿವುಂಡಾ ಎಂಬವರ ಮೇಲೆ ಹಲ್ಲೆಯಾಗಿದೆ. ಅಂಗತ ಕರಮೆ, ಅನಿಕೇತ್ ಕರಮೆ, ಶಾಹು ಮಗದುಮ್ ಸೇರಿದಂತೆ ಹಲವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಂಕಲಿ ಗ್ರಾಮದಲ್ಲಿ ಕೆಲವು ಯುವಕರು ಶಿವಾಜಿ ಪುತ್ಥಳಿ ಬಳಿ ಕನ್ನಡ ಧ್ವಜ ಅಳವಡಿಸಿದ್ದರು ಎಂದು ಹೇಳಲಾಗಿದೆ. ತೆರವು ಮಾಡುವ ವಿಚಾರಕ್ಕೆ ಜಗಳ ನಡೆದಿದ್ದು, ಯುವಕರನ್ನು ಥಳಿಸಲಾಗಿದೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇತರೆ ನಾಲ್ವರಿಗೆ ಶೋಧ ನಡೆಯುತ್ತಿದೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ