Breaking News

ಪ್ರಮುಖ3 ಆರೋಪಿಗಳನ್ನ ಕಸ್ಟಡಿಗೆ ತೆಗೆದುಕೊಂಡ ಸಿಐಡಿ ತಂಡ

Spread the love

ಬೆಳಗಾವಿ: ಇಲ್ಲಿನ ವಂಟಮೂರಿ ಎಂಬಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ತಂಡವು ಕಸ್ಟಡಿಗೆ ತೆಗೆದುಕೊಂಡು ತನಿಖೆ ಆರಂಭಿಸಿದೆ.

ಬೆಳಗಾವಿಯ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.

ಮೊದಲನೇ ಆರೋಪಿ ಬಸಪ್ಪ ರುದ್ರಪ್ಪ ನಾಯಕ, ಎರಡು ಮತ್ತು ಮೂರನೇ ಆರೋಪಿಗಳಾದ ರಾಜು ರುದ್ರಪ್ಪ ನಾಯಕ, ಶಿವಪ್ಪ ರಾಯಪ್ಪ ವಣ್ಣೂರ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ಅಧಿಕಾರಿಗಳ ತಂಡ ವಿಚಾರಣೆ ನಡೆಸುತ್ತಿದೆ.

ಕಳೆದ ಕೆಲವು ದಿನಗಳ ಹಿಂದೆ ಜೋಡಿಯೊಂದು ಪರಾರಿಯಾದ ಕಾರಣಕ್ಕೆ ಯುವಕನ ತಾಯಿಯ ಮೇಲೆ ಆರೋಪಿಗಳು ಅಮಾನವೀಯವಾಗಿ ಹಲ್ಲೆ ನಡೆಸಿದ್ದರು. ಈ ಘಟನೆ ದೇಶಾದ್ಯಂತ ಸುದ್ದಿಯಾಗಿತ್ತು. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ.


Spread the love

About Laxminews 24x7

Check Also

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು

Spread the loveಸನ್ಮಾನ್ಯ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಹಾಗೂ ಬೆಳಗಾವಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ