Breaking News

ಪ್ರಮುಖ3 ಆರೋಪಿಗಳನ್ನ ಕಸ್ಟಡಿಗೆ ತೆಗೆದುಕೊಂಡ ಸಿಐಡಿ ತಂಡ

Spread the love

ಬೆಳಗಾವಿ: ಇಲ್ಲಿನ ವಂಟಮೂರಿ ಎಂಬಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ತಂಡವು ಕಸ್ಟಡಿಗೆ ತೆಗೆದುಕೊಂಡು ತನಿಖೆ ಆರಂಭಿಸಿದೆ.

ಬೆಳಗಾವಿಯ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.

ಮೊದಲನೇ ಆರೋಪಿ ಬಸಪ್ಪ ರುದ್ರಪ್ಪ ನಾಯಕ, ಎರಡು ಮತ್ತು ಮೂರನೇ ಆರೋಪಿಗಳಾದ ರಾಜು ರುದ್ರಪ್ಪ ನಾಯಕ, ಶಿವಪ್ಪ ರಾಯಪ್ಪ ವಣ್ಣೂರ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ಅಧಿಕಾರಿಗಳ ತಂಡ ವಿಚಾರಣೆ ನಡೆಸುತ್ತಿದೆ.

ಕಳೆದ ಕೆಲವು ದಿನಗಳ ಹಿಂದೆ ಜೋಡಿಯೊಂದು ಪರಾರಿಯಾದ ಕಾರಣಕ್ಕೆ ಯುವಕನ ತಾಯಿಯ ಮೇಲೆ ಆರೋಪಿಗಳು ಅಮಾನವೀಯವಾಗಿ ಹಲ್ಲೆ ನಡೆಸಿದ್ದರು. ಈ ಘಟನೆ ದೇಶಾದ್ಯಂತ ಸುದ್ದಿಯಾಗಿತ್ತು. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ.


Spread the love

About Laxminews 24x7

Check Also

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ

Spread the loveಬೆಂಗಳೂರು: ಸರ್ಕಾರದಿಂದ ಉದ್ಯೋಗಸ್ಥ ಮಹಿಯರಿಗೆ ಋತುಚಕ್ರ ರಜೆ ನೀಡಲು ಆದೇಶ ಹಿನ್ನೆಲೆಯಲ್ಲಿ ಶಿಕ್ಷಣ ‌ಇಲಾಖೆಯಲ್ಲಿ ಕಡ್ಡಾಯವಾಗಿ ಋತುಚಕ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ