Breaking News

ಯುವಕನಿಂದ ಚಕ್ಕಡಿ ಎಳೆಯುತ್ತ ಉಳವಿ ಯಾತ್ರೆ

Spread the love

ಧಾರವಾಡ: ಚಕ್ಕಡಿಯ ನೊಗ ಹೆಗಲ ಮೇಲಿಟ್ಟುಕೊಂಡು ಚಕ್ಕಡಿಯನ್ನೇ ಎಳೆದುಕೊಂಡು ಮುಸ್ಲಿಂ ಸಮುದಾಯ ವ್ಯಕ್ತಿಯೊಬ್ಬರು ಉಳವಿಯತ್ತ ಪ್ರಯಾಣವನ್ನು ಗುರುವಾರ ಆರಂಭಿಸಿದ್ದು, ಇದು ಈಗ ಎಲ್ಲರ ಗಮನ ಸೆಳೆದಿದೆ.

ಈ ಸಾಹಸಮಯ ಭಕ್ತಿಯ ಸಂಕಲ್ಪ ಕೈಗೊಂಡಿರುವುದು ಮಂಗಳಗಟ್ಟಿ ಗ್ರಾಮದ ಇಮಾಮ್‌ಸಾಬ್ ನದಾಫ್.

ಗರಗದ ಕಲ್ಮಠದ ಶ್ರೀಗಳೊಂದಿಗೆ ಗರಗ ಮಡಿವಾಳೇಶ್ವರ ಮಠದಿಂದ ಉಳವಿ ಚೆನ್ನಬಸವೇಶ್ವರ ದೇವಸ್ಥಾನಕ್ಕೆ ಏಳನೇ ವರ್ಷದ ಪಾದಯಾತ್ರೆಯನ್ನು ಆರಂಭಿಸಿದ್ದು, ಈ ಪಾದಯಾತ್ರೆ ಮೂಲಕ ಇಮಾಮ್‌ಸಾಬ್ ಗಮನ ಸೆಳೆಯುವಂತೆ ಮಾಡಿರುವುದು ವಿಶೇಷ.

ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಇಮಾಮ್‌ಸಾಬ್ ಚಕ್ಕಡಿಯನ್ನು ಹೆಗಲ ಮೇಲಿಟ್ಟಕೊಂಡು ಉಳವಿ ಚೆನ್ನಬಸವೇಶ್ವರ ದೇವಸ್ಥಾನದತ್ತ ಪಾದಯಾತ್ರೆ ಕೈಗೊಂಡಿರುವ ಇಮಾಮ್‌ಸಾಬ್ ಅವರಿಗೆ ಮಂಗಳಗಟ್ಟಿ ಗ್ರಾಮದ ಯುವಕರಾದ ಮುತ್ತು ಬ್ಯಾಳಿ, ವಿಠ್ಠಲ ಕಮ್ಮಾರ, ಆನಂದ ಸಬರದ ಹಾಗೂ ಸಂತೋಷ ಬಾಗಣ್ಣವರ ಕೂಡ ಸಾಥ್ ನೀಡಿದ್ದಾರೆ.


Spread the love

About Laxminews 24x7

Check Also

ಇಂಗ್ಲಿಷ್ ಕಾಲುವೆಯ 48.3 ಕಿ.ಮೀ ಈಜಿ ಸಾಧನೆ: ಇನ್ಸ್​ಪೆಕ್ಟರ್ ಮುರುಗೇಶ ಚನ್ನಣ್ಣವರ್ ತಂಡದಿಂದ ಮತ್ತೊಂದು ಮೈಲಿಗಲ್ಲು

Spread the loveಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್​​ಪೆಕ್ಟರ್​​ ಮುರುಗೇಶ ಚನ್ನಣ್ಣವರ್​ ಹಾಗೂ ಕೆಎಂಸಿಆರ್‌ಐ ಎಂಬಿಬಿಎಸ್ ವಿದ್ಯಾರ್ಥಿ ಅಮನ್ ಶಾನಭಾಗ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ