Breaking News

ಟಿಪ್ಪು ಅವತಾರವೇ ಸಿದ್ದು – ಮತ್ತೆ ವಿವಾದವೆಬ್ಬಿಸಿದ ಯತ್ನಾಳ್‌!

Spread the love

ಬೆಂಗಳೂರು : ಶಾಲಾಕಾಲೇಜುಗಳಲ್ಲಿ ಹಿಜಾಬ್‌ (Hijab) ನಿರ್ಬಂಧಿಸಿ ಬಿಜೆಪಿ (BJP) ಸರ್ಕಾರದಲ್ಲಿ ಹೊರಡಿಸಿದ್ದ ಆದೇಶವನ್ನು ರದ್ದಪಡಿಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ಕ್ರಮಕ್ಕೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್‌ (Basanagowda patil yatnal) ಕಿಡಿಕಾಡಿದ್ದಾರೆ.

ಟಿಪ್ಪು ಸುಲ್ತಾನ್‌ (Tippu sultan) ಪುನರಾವತಾರವೇ ಸಿಎಂ ಸಿದ್ದರಾಮಯ್ಯ ಆಗಿದ್ದು, ಈ ನಿರ್ಧಾರದಲ್ಲಿ ಆಶ್ಚರ್ಯವೇನಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಶಾಲೆಗಳಲ್ಲಿ ಸಮಾನತೆ ಇರಲಿ ಎಂಬ ಉದ್ದೇಶದಿಂದ ಬಿಜೆಪಿ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ಧರಿಸದಂತೆ ಆದೇಶ ಹೊರಡಿಸಿತ್ತೇ ಹೊರತು ಹಿಜಾಬ್‌ ನಿಷೇಧಿಸರಲಿಲ್ಲ. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಸಮವಸ್ತ್ರದ ಕಾಯಿದೆ ಮಾಡಿದ್ದೇ ಈ ಉದ್ದೇಶದಿಂದ ಎಂದು ಯತ್ನಾಳ್‌ ಹೇಳಿದ್ದಾರೆ.

ನಾಳೆ ಹಿಂದೂ ಸಮುದಾಯದ ಹುಡುಗರು ಕೇಸರಿ ಶಾಲು ಧರಸಿ ಬಂದರೆ ಸಂಘರ್ಷಕ್ಕೆ ದಾರಿಯಾಗಲಿದೆ ಎಂದು ಯತ್ನಾಳ್‌ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಬಾಗಲಕೋಟೆ: ಹಳ್ಳಕ್ಕೆ ಬಿದ್ದ ಬಾಲಕ, ಕಾಪಾಡಲು ಹೋದ ಯುವಕ ನೀರುಪಾಲು

Spread the loveಬಾಗಲಕೋಟೆ: ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್​ ತಾಲೂಕಿನ ಚಿಕನಾಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ