Breaking News

ಮಂಡ್ಯದಿಂದಲೇ ಸ್ಪರ್ಧಿಸುವೆ.ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಸುಮಲತಾ ಶಾಕ್

Spread the love

ಬೆಂಗಳೂರು: 2019ರ ಲೋಕಸಭೆ ಚುನಾವಣೆ ವೇಳೆ ಹೈವೋಲ್ಟೆಜ್ ಕದನವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರ ಇದೀಗ 2024ರ ಚುನಾವಣೆ ಮುನ್ನವೇ ರಂಗೇರುವ ಸಾಧ್ಯತೆ ಇದೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಮಂಡ್ಯ ಕ್ಷೇತ್ರ ತಲೆನೋವಾಗುವ ಮುನ್ಸೂಚನೆ ಸಿಕ್ಕಿದೆ. ಇದಕ್ಕೆ ಕಾರಣ ಹಾಲಿ ಸಂಸದೆ ಸುಮಲತಾ ನೀಡಿರುವ ಹೇಳಿಕೆ.

 

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿದರೆ ಮಂಡ್ಯದಿಂದ ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸುಮಲತಾ ತಿಳಿಸಿದ್ದಾರೆ. ನನ್ನ ಸ್ಪರ್ಧೆ ಸಂಬಂಧ ಹರಡಿರುವ ವದಂತಿಗಳಿಗೆ ಬೆಂಬಲಿಗರೂ ಸೇರಿ ಯಾರೂ ಕಿವಿಗೊಡಬಾರದು. ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆನ್ನುವುದು ನನ್ನ ಬಯಕೆ. ಈ ಬಗ್ಗೆ ಮಾರ್ಚ್ ನಂತರ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.

ಸುಮಲತಾ ಅವರ ಹೇಳಿಕೆ ಮಂಡ್ಯ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಜೆಡಿಎಸ್‌ ನಾಯಕರಿಗೆ ನುಂಗಲಾರದ ತುತ್ತಾಗಿದೆ. ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಹೇಳಿಕೆ ನೀಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌, ತಾವೂ ಸಹ ಮಂಡ್ಯದಿಂದಲೇ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಬೆಳವಣಿಗೆಗಳು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಪ್ರಕ್ರಿಯೆಗೆ ಪ್ರಾರಂಭದಲ್ಲೇ ತೊಡಕು ಎದುರಾಗಿದೆ.


Spread the love

About Laxminews 24x7

Check Also

ಸಿಎಂ ಬದಲಾವಣೆ ವಿಚಾರ: ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆ ಆದೇಶವಿದೆ: ಮಧು ಬಂಗಾರಪ್ಪ

Spread the loveಗದಗ: “ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ, ಈ ಬಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ