Breaking News

ಆರೋಗ್ಯ ಇಲಾಖೆ ದಿನನಿತ್ಯ ಎರಡು ಬಾರಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುತ್ತಿತ್ತು. ಆದ್ರೆ ಇನ್ನು ಮುಂದೆ ಸಂಜೆ ಮಾತ್ರ ಸುದ್ದಿಗೋಷ್ಠಿ

Spread the love

ಬೆಂಗಳೂರು:  ಕೊರೊನಾ ಸೋಂಕಿತರು, ಗುಣಮುಖರಾದವರ ಬಗ್ಗೆ ಈವರೆಗೂ ರಾಜ್ಯ ಆರೋಗ್ಯ ಇಲಾಖೆ ದಿನನಿತ್ಯ ಎರಡು ಬಾರಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುತ್ತಿತ್ತು. ಆದ್ರೆ ಇನ್ನು ಮುಂದೆ ಸಂಜೆ ಮಾತ್ರ ಸುದ್ದಿಗೋಷ್ಠಿ ನಡೆಸಿ ಮಾಹಿತಿ  ನೀಡಲಾಗುವುದು ಎಂದು  ವೈದ್ಯಕೀಯ  ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಸುಧಾಕರ್, ಕಳೆದ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಹೀಗಾಗಿ ಇತರೆ ರಾಜ್ಯಗಳಂತೆಯೇ ಮಧ್ಯಾಹ್ನದ ಬುಲೆಟಿನ್ ಬಿಡುಗಡೆ ಮಾಡದಿರಲು ಟಾಸ್ಕ್ ಫೋರ್ಸ್ ನಿರ್ಧರಿಸಿದೆ.  ಸಂಜೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸುದ್ದಿಗೋಷ್ಠಿಯನ್ನು  ನಡೆಸಲಿದ್ದಾರೆ. ಅಲ್ಲೇ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದಾರೆ ಎಂದು ತಿಳಿಸಿದ್ರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ