Breaking News

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ

Spread the love

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
(Education minister Madhu Bangarappa) ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ನಿನ್ನೆ ಬುಧವಾರ ಮಧ್ಯರಾತ್ರಿ ಸುಮಾರಿಗೆ ಅಪಘಾತವಾಗಿದೆ. ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದ್ದು, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಕಾರಿನಲ್ಲಿ ಸಚಿವರು ಸೇರಿ ಮೂವರು ಪ್ರಯಾಣಿಸುತ್ತಿದ್ದು, ಎಲ್ಲರೂ ಬಚಾವ್ ಆಗಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದ್ದು ಬದಲಿ ವಾಹನ ವ್ಯವಸ್ಥೆ ಮಾಡಿಕೊಂಡು ಸಚಿವರು ಬೆಂಗಳೂರಿಗೆ ತೆರಳಿದ್ದಾರೆ.

Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ