Breaking News

“ಯಡಿಯೂರಪ್ಪ ಒಪ್ಪಿದರೆ ವಿಪಕ್ಷಗಳ 22 ಶಾಸಕರ ರಾಜೀನಾಮೆ ಕೊಡಿಸುತ್ತೇನೆ”

Spread the love

ಬೆಂಗಳೂರು, ಮೇ 30- ಸದ್ಯಕ್ಕೆ ನಮಗೆ ಬಹುಮತವಿದೆ. ನಾವು ವಿಪಕ್ಷಗಳ ಶಾಸಕರ ರಾಜೀನಾಮೆ ಕೆಲಸಕ್ಕೆ ಕೈ ಹಾಕುವುದಿಲ್ಲ. ನಮ್ಮ ಜತೆ ಬರಲು ಸಾಕಷ್ಟು ಶಾಸಕರು ತಯಾರಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿಗೆ ನೀಡಿದರೆ 20 ರಿಂದ 22 ಜನ ಶಾಸಕರನ್ನು ರಾಜೀನಾಮೆ ಕೊಡಿಸುತ್ತೇನೆ. ಸದ್ಯಕ್ಕೆ ಬಹುಮತವಿರುವುದರಿಂದ ಆ ಕೆಲಸಕ್ಕೆ ಕೈ ಹಾಕುವುದಿಲ್ಲ

ಬೆಳಗಾವಿ 3, ಬಿಜಾಪುರ 3, ಬೀದರ್ 2, ಕಲ್ಬುರ್ಗಿ 1, ರಾಯಚೂರು 2, ಕೊಪ್ಪಳದಲ್ಲಿ 1 ಬಳ್ಳಾರಿ 2, ದಾವಣಗೆರೆ 1, ಚಿತ್ರದುರ್ಗ 1, ಬೆಂಗಳೂರು ಸುತ್ತಮುತ್ತ 2 ಶಾಸಕರು ತಯಾರಿದ್ದಾರೆ ಎಂದು ಹೇಳಿದರು. ಯಡಿಯೂರಪ್ಪ ಜತೆ ನಾವು ಕೊನೆಯವರೆಗೂ ನಿಲ್ಲುತ್ತೇವೆ ಎಂದು ತಿಳಿಸಿದ ಅವರು, ಬಿಜೆಪಿಯಲ್ಲಿ ಯಾವುದೇ ರೀತಿಯ ಭಿನ್ನಮತೀಯ ಸಭೆ ನಡೆದಿಲ್ಲ. ಊಟಕ್ಕಾಗಿ ಶಾಸಕರು ಸೇರಿದ್ದಾರೆ.

ಉಮೇಶ್ ಕತ್ತಿ ಸಚಿವ ಸ್ಥಾನ ಕೇಳೋದು ಅವರ ಸಹೋದರನಿಗೆ ರಾಜ್ಯಸಭೆ ಸ್ಥಾನ ಕೇಳೋದು ತಪ್ಪಲ್ಲ. ಎಲ್ಲರೂ ಕುಳಿತು ಅಂತಿಮ ನಿರ್ಧಾರ ಮಾಡ್ತೇವೆ. ಮುಖ್ಯಮಂತ್ರಿ ಯಡಿಯೂರಪ್ಪ ನಮ್ಮ ನಾಯಕರು. ಅವರು ಹಾಗೂ ಅಮಿತ್ ಶಾ ಅವರನ್ನು ನಂಬಿ ಬಂದಿದ್ದೇವೆ.

ಕೊನೆಯವರೆಗೆ ಅವರ ಜತೆ ಇರುತ್ತೇವೆ ಎಂದು ತಿಳಿಸಿದರು. ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ರಮೇಶ್ ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ