Breaking News

ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಜಟಾಪಟಿ

Spread the love

ರಾಮನಗರ : ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಜಟಾಪಟಿ ಮುಂದುವರೆದಿದ್ದು, ರಾಮನಗರ ತಾಲೂಕಿನ ಅಣ್ಣಹಳ್ಳಿಯ ಗ್ರಾಮಸ್ಥರ ಪ್ರತಿಭಟನೆ ತಾರಕಕ್ಕೇರಿದೆ.

ಇಂದು ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಹತ್ತಾರು ಕ್ಯಾನ್ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾರ್ಯದರ್ಶಿ ನೇಮಕ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಹೆದ್ದಾರಿಯಲ್ಲಿ ಹಸು ಕಟ್ಟಿ, ರಸ್ತೆ ತಡೆದು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಬಮೂಲ್ ನಿರ್ದೇಶಕ ಪಿ. ನಾಗರಾಜು ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿದ್ದಾರೆ. ಕಾರ್ಯದರ್ಶಿ ಬದಲಾವಣೆ ಮಾಡುವಂತೆ ಗ್ರಾಮಸ್ಥರು ಪಟ್ಟುಹಿಡಿದಿದ್ದಾರೆ. ರಸ್ತೆಯಲ್ಲೇ ಮಲಗಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು?: ಆತ ಏನು ಕೆಲಸ ಮಾಡುತ್ತಿದ್ದಾನೆ?

Spread the loveಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ