Breaking News

ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್‌ಟೇಬಲ್​ನಿಂದ ವಂಚನೆ

Spread the love

ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್‌ಟೇಬಲ್​ನಿಂದ ವಂಚನೆ

ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್‌ ಕಾರ್ತಿಕ್​​ರಿಂದ ಗೃಹರಕ್ಷಕ ದಳದ ಸಿಬ್ಬಂದಿ ರಾಜುಗೆ ವಂಚನೆ ಮಾಡಲಾಗಿದೆ. ನೆಲಮಂಗಲ ಟೌನ್ ಠಾಣೆಗೆ ಹೋಂಗಾರ್ಡ್‌ ರಾಜು ದೂರು ನೀಡಿದ್ದಾರೆ.

ನೆಲಮಂಗಲ, ಜನವರಿ 08: ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ (Fraud) ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್‌ ಕಾರ್ತಿಕ್​​ರಿಂದ ಗೃಹರಕ್ಷಕ ದಳದ ಸಿಬ್ಬಂದಿ ರಾಜುಗೆ ವಂಚನೆ ಮಾಡಲಾಗಿದೆ. ಅಡವಿಟ್ಟ ಕಾರು ಬಿಡಿಸಿಕೊಳ್ಳಲು ರಾಜು ಬಳಿಯಿಂದ ಹಣ ಪಡೆದಿದ್ದ.

ಕಾರ್ತಿಕ್ ಮಾತು ನಂಬಿ ರಾಜು ಬ್ಯಾಂಕ್‌ನಲ್ಲೇ ಹಣ ಕೊಟ್ಟಿದ್ದ. ಸಾಕ್ಷಿಗಾಗಿ ಬ್ಯಾಂಕಿನಲ್ಲಿ ಹಣ ಎಣಿಸುವ ದೃಶ್ಯ ಸೆರೆ ಹಿಡಿಯಲಾಗಿದೆ. ಇದೀಗ ಕಾನ್ಸ್‌ಟೇಬಲ್ ಕಾರ್ತಿಕ್ ಹಣ ವಾಪಸ್ ಕೇಳಿದರೆ ಸಬೂಬು ಹೇಳುತ್ತಿದ್ದಾರೆ. ಈ ಕುರಿತಾಗಿ ನೆಲಮಂಗಲ ಟೌನ್ ಠಾಣೆಗೆ ಹೋಂಗಾರ್ಡ್‌ ರಾಜು ದೂರು ನೀಡಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ