Home / ರಾಜಕೀಯ / ನಡು ರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳು

ನಡು ರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳು

Spread the love

ರಾಯಚೂರು, : ನಡು ರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ರಾಯಚೂರು (Raichur) ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರುಕಾಲುವೆ ಬಳಿನಡೆದಿದೆ. ಕಾಪರ್ ವೈರ್ ಕಳ್ಳತನ ಆರೋಪಿಗಳನ್ನು ಬಂಧಿಸಲು ಹೋದಾಗ, ಬಳಗಾನೂರ ಠಾಣೆಯ ಪೊಲೀಸ್​ ಪೇದೆ(Police constable) ಗಳಾದ ಮಂಜುನಾಥ್​ ಹಾಗೂ ಗೋಪಾಲ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ.

ಗಾಯಗೊಂಡ ಕಾನ್ಸ್​ಟೇಬಲ್​ಗಳಿಗೆ ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಲ್ಲೆಗೈದ ಆರೋಪಿಗಳಿಗಾಗಿ ಬಳಗಾನೂರ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಕುರಿತು ಬಳಗಾನೂರ ಠಾಣೆಯಲ್ಲಿ 6 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಪೊಲೀಸರ ಮೇಲೆ ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ