Breaking News

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿ ಎಂದ ಕಾಂಗ್ರೆಸ್ ಹೈಕಮಾಂಡ್

Spread the love

ಬೆಂಗಳೂರು: ಅಗತ್ಯ ಬಿದ್ದರೆ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸಂಜೆ ಕೆಲವು ಸಚಿವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಹಲವು ಕ್ಷೇತ್ರಗಳಲ್ಲಿ “ಗೆಲ್ಲಬಲ್ಲ” ಅಭ್ಯರ್ಥಿಗಳ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಲಾಗುತ್ತದೆ,
ಹೀಗಾಗಿ ಕೆಹೆಚ್ ಮುನಿಯಪ್ಪ (ಏಳು ಬಾರಿ ಕೋಲಾರ ಸಂಸದ), ಕೆಎನ್ ರಾಜಣ್ಣ ಮತ್ತು ಬಿ ನಾಗೇಂದ್ರ ಅವರಂತಹ ಸಚಿವರನ್ನು ಕಣಕ್ಕಿಳಿಸಲು ಪಕ್ಷ ಮುಂದಾಗಬಹುದು ಎಂದು ತಿಳಿದು ಬಂದಿದೆ. ಅಂತಹ ಪರಿಸ್ಥಿತಿ ಎದುರಾದರೆ, ಸಚಿವರು ಸ್ಪರ್ಧಿಸಬೇಕಾಗುತ್ತದೆ ಎಂದು ಸೂಚಿಸಲಾಗಿದೆ.

Spread the love

About Laxminews 24x7

Check Also

ಶಾಸಕ ಭರಮಗೌಡ (ರಾಜು) ಕಾಗೆಗೆ ಒಲಿದು ಬಂದ ಅದೃಷ್ಟ

Spread the love  ಸಚಿವ ಸತೀಶ್ ಜಾರಕಿಹೊಳಿಯವರ ಮಧ್ಯಸ್ಥಿಕೆಯಲ್ಲಿ ನಡೆದ ಕಾಗವಾಡ ಕ್ಷೇತ್ರದ ಅವಿರೋಧ ಆಯ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ