Breaking News

ಯತ್ನಾಳ್ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ,ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ

Spread the love

ಬೆಂಗಳೂರು/ವಿಜಯಪುರ, (ಜನವರಿ 12): ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ (Basangouda Patil Yatnal) ವಿರುದ್ಧದ ಕೇಸ್​ಗೆ ಕರ್ನಾಟಕ ಹೈಕೋರ್ಟ್ (Karnataka high Court) ತಡೆ ನೀಡಿದೆ. ವಿಧಾನಸಭಾ ಚುನಾವಣೆ (Karnataka Assembly Elections 2023) ವೇಳೆ‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿಯಲ್ಲಿ ಕೇಸ್ ದಾಖಲಾಗಿತ್ತು. ಆದ್ರೆ, ಇದೀಗ ಈ ಪ್ರಕರಣಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಕೋರ್ಟ್​ ಮೆಟ್ಟಿಲೇರಿದ ರಮೇಶ ಜಾರಕಿಹೊಳಿ

ಮತ್ತೊಂದೆಡೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಕೋರುವಂತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಾಲ ಪಾವತಿಸದೆ ಸಹಕಾರಿ ಬ್ಯಾಂಕ್‌ಗೆ ವಂಚನೆ ಆರೋಪ ಪ್ರಕರಣವನ್ನು ರದ್ದು ಕೋರಿ ರಮೇಶ್ ಜಾರಕಿಹೊಳಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಕಂಪನಿಯ ಹುದ್ದೆಗಳಿಗೆ ರಾಜೀನಾಮೆ ನೀಡಿ ಹೊಸಬರ ನೇಮಕವಾಗಿದೆ. ಎನ್‌ಸಿಎಲ್‌ಟಿಯಲ್ಲಿ ವಿಚಾರಣೆ ಇರುವಾಗ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಿಮಿನಲ್‌ ಪ್ರಕರಣ ರದ್ದು ಮಾಡುವಂತೆ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ 232 ಕೋಟಿ 88 ಲಕ್ಷ ರೂ. ಸಾಲ ಪಡೆದು ಪಡೆದು ಬಳಿಕ ಮರುಪಾವತಿಸದ ಹಿನ್ನೆಲೆಯಲ್ಲಿ ಅಪೆಕ್ಸ್ ಬ್ಯಾಂಕ್ ದೂರು ನೀಡಿತ್ತು. ಈ ದೂರಿನ ಅನ್ವಯ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ