Breaking News

ಕಲ್ಲಡ್ಕ ಪ್ರಭಾಕರ್‌ಗೆ ಜಾಮೀನು ಮಂಜೂರು

Spread the love

ಮಂಡ್ಯ: ಮುಸ್ಲಿಮ್‌ ಮಹಿಳೆಯರ ವಿರುದ್ಧ ಅವಹೇಳನಕಾರಿ (Defamatory Statement) ಹೇಳಿಕೆ ನೀಡಿದ ಆರೋಪ ಹೊತ್ತಿರುವ RSS ಮುಖಂಡ ಕಲ್ಲಡ್ಕ ಪ್ರಭಾಕರ್‌ಗೆ (Kalladka Prabhakar Bhat) ಶ್ರೀರಂಗಪಟ್ಟಣ ಕೋರ್ಟ್‌ನಿಂದ ಜಾಮೀನು ಮಂಜೂರಾಗಿದೆ.

ಹನುಮ ಜಯಂತ್ಯುತ್ಸವದ ಅಂಗವಾಗಿ ಡಿಸೆಂಬರ್‌ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಪ್ರಭಾಕರ್‌ ಭಟ್‌ ಮುಸ್ಲಿಮರ ವಿರುದ್ಧ ಧಾರ್ಮಿಕ ದ್ವೇಷಕಾರಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್‌ ನೀಡಿದ್ದರು.

 

ಶ್ರೀರಂಗಪಟ್ಟಣ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಚಾರ್ಜ್‌ ಶೀಟ್‌ ಅನ್ನು ಕೋರ್ಟ್‌ಗೆ ಪೊಲೀಸರು ಸಲ್ಲಿಸಿದ್ದರು. ಘಟನೆಯ ಅರ್ಜಿ ವಿಚಾರಣೆ ಇಂದು ನಡೆದಿದ್ದು, ವಿಚಾರಣೆ ಬಳಿಕ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ. ಕಲ್ಲಡ್ಕ ಪರ ವಕೀಲ ಚಂದ್ರೇಗೌಡ ವಾದ ಮಂಡಿಸಿದ್ದಾರೆ.


Spread the love

About Laxminews 24x7

Check Also

ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ: ಮಧು ಬಂಗಾರಪ್ಪ

Spread the loveಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ