Breaking News

ಪೋಷಕರ ಜೀವ ಬೆದರಿಕೆ ಆರೋಪ ,ರಕ್ಷಣೆ ಕೋರಿ ರಕ್ಷಣೆ ಕೋರಿ ಬಳ್ಳಾರಿ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ ಅವರಿಗೆ ಮನವಿ

Spread the love

ಬಳ್ಳಾರಿ, ಜನವರಿ 28: ಪ್ರೀತಿಸಿ ಮದುವೆಯಾಗಿದಕ್ಕೆ ನವ ಜೋಡಿಗಳಿಗೆ ವಧುವಿನ ಪೋಷಕರು ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಪೋಷಕರು ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನವಜೋಡಿರಕ್ಷಣೆ ಕೋರಿ ಬಳ್ಳಾರಿ (Bellary) ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ (SP) ಅವರಿಗೆ ಮನವಿ ಮಾಡಿದ್ದಾರೆ.

ಬಳ್ಳಾರಿ ತಾಲೂಕಿನ ಗೋನಾಳ ಗ್ರಾಮದ ನಾರಾಯಣ, ಸಿರಗುಪ್ಪ ತಾಲೂಕಿನ ಊಳೂರು ಗ್ರಾಮದ ಶಿಲ್ಪಾ ಕಳೆದ ಐದು ವರ್ಷದಿಂದ ಪ್ರೀತಿಸುತ್ತಿದ್ದಾರೆ. ಶಿಲ್ಪಾ ಬಳ್ಳಾರಿಯಲ್ಲಿ ದೊಡ್ಡಮ್ಮನ ಮನೆಯಲ್ಲಿದ್ದುಗೊಂಡು, ಹೈಸ್ಕೂಲ್ ಓದುವ ವೇಳೆ ನಾರಾಯಣನನ್ನು ಪ್ರೀತಿ ಮಾಡಲು ಆರಂಭಿಸಿದ್ದಾರೆ.

 

9ನೇ ತರಗತಿಯಲ್ಲಿ ಶಿಲ್ಪಾ ಅವರಿಗೆ ಪ್ರೀತಿ ಚಿಗುರಿದೆ. ಯುವಕ ನಾರಾಯಣ್​ ಜಿಲ್ಲಾ ಪಂಚಾಯಿತಿಯಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರೇಮಿಗಳು ಒಂದೇ ಜಾತಿಯವರಾಗಿದ್ದಾರೆ. ಈ ಪ್ರೀತಿ ವಿಚಾರ ಶಿಲ್ಪಾ ಮನೆಯವರಿಗೆ ತಿಳಿದಿದೆ. ಆಗ ಶಿಲ್ಪಾ ಅಣ್ಣಂದಿರು ಇಬ್ಬರನ್ನು ಬೇರೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ನಾರಾಯಾಣ ಪೋಷಕರು ಇವರ ಮದುವೆ ಒಪ್ಪಿಗೆ ನೀಡಿದ್ದಾರೆ.

ಇನ್ನು ನಾರಾಯಣನನ್ನು ಮರೆಯುವಂತೆ, ಬೇರೆ ಹುಡುಗನನ್ನು ಮದುವೆಯಾಗುವಂತೆ ಶಿಲ್ಪಾರಿಗೆ ಆಕೆಯ ಅಣ್ಣಂದಿರು ಒತ್ತಡ ಹಾಕಲು ಆರಂಭಿಸಿದ್ದಾರೆ. ಆದರೆ ಶಿಲ್ಪಾ ಇದಕ್ಕೆ ಒಪ್ಪದೆ ಮನೆ ಬಿಟ್ಟು ಬಂದಿದ್ದಾರೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ