Breaking News

33 ದಿನಗಳಲ್ಲೇ ರಾಯರ ಮಠಕ್ಕೆ ಕೋಟಿ ಕೋಟಿ ಕಾಣಿಕೆ

Spread the love

ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕೇವಲ 33 ದಿನಗಳಲ್ಲಿ ಕೋಟಿ ಕೋಟಿ ಆದಾಯ ಹರಿದು ಬಂದಿದೆ. ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಮಠದ ನೂರಾರು ಸಿಬ್ಬಂದಿಯಿಂದ ದೇವರ ಹುಂಡಿ ಎಣಿಕೆ ಕಾರ್ಯ ನಡೆಯಿತು.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ತಾಲೂಕಿನ ತುಂಗಭದ್ರಾ ನದಿಯ ದಡದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕೇವಲ 33 ದಿನಗಳಲ್ಲಿ ಕೋಟಿ ಕೋಟಿ ಆದಾಯ ಹರಿದು ಬಂದಿದೆ.

 ರಾಯಚೂರಿನ ಮಂತ್ರಾಲಯದ ರಾಯರ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ರಾಯರ ಮಠದಲ್ಲಿ 33 ದಿನದಲ್ಲಿ 3 ಕೋಟಿ 83 ಲಕ್ಷದ 70 ಸಾವಿರ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

 ಸಂಕ್ರಾಂತಿ ಹಬ್ಬದ ಹಿನ್ನೆಲೆ ಈ ಬಾರಿ ಹೆಚ್ಚಿನ ಪ್ರಮಾಣದ ಕಾಣೆಕೆ ಸಂಗ್ರಹವಾಗಿದೆ. ಡಾ.ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಎಣಿಕೆ ಕಾರ್ಯ ನಡೆಯಿತು. ರಾಯರ ಮಠಕ್ಕೆ ಕೋಟಿ ಕೋಟಿ ಆದಾಯ ಹರಿದು ಬಂದಿದೆ.

 ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಮಠದ ನೂರಾರು ಸಿಬ್ಬಂದಿಯಿಂದ ದೇವರ ಹುಂಡಿ ಎಣಿಕೆ ಕಾರ್ಯ ನಡೆಯಿತು. ಸಿಸಿಟಿವಿ ಕ್ಯಾಮರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು.

 ಶ್ರೀರಾಘವೇಂದ್ರ ಸ್ವಾಮಿ ಮಠವು ರಾಯರ ಮಠವೆಂದೇ ಪ್ರಸಿದ್ದಿಪಡೆದಿದೆ. ಈ ಮಠವನ್ನು ಹಿಂದೆ ಕುಂಭಕೋಣಂ ಮಠ ಅಥವಾ ವಿಜಯೇಂದ್ರ ಮಠ, ದಕ್ಷಿಣಾದಿ ಕವೀಂದ್ರ ಮಠ ಅಥವಾ ದಕ್ಷಿಣಾದಿ ಮಠ ಎಂದು ಕರೆಯಲಾಗುತ್ತಿತ್ತು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ