Breaking News

ಇ ಗ್ರಂಥಾಲಯದಲ್ಲಿ ರೈತ ಆತ್ಮಹತ್ಯೆ

Spread the love

ಹುಕ್ಕೇರಿ: ಸ್ಥಳೀಯ ಕೋರ್ಟ್ ಆವರಣದಲ್ಲಿರುವ ಇ- ಗ್ರಂಥಾಲಯದ ಸಂಗ್ರಹ ಕೊಠಡಿಯಲ್ಲಿ ವಕೀಲೆಯೊಬ್ಬರ ಪತಿ, ರೈತ ಲಗಮಪ್ಪ ಹೊಸೂರಿ(48) ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ತಾಲ್ಲೂಕಿನ ನೇರ್ಲಿ ಗ್ರಾಮದವರಾದ ಲಗಮಪ್ಪ ಜಾಬಾಪುರದಲ್ಲಿ ವಾಸಿಸುತ್ತಿದ್ದರು.

ಗ್ರಾಮದಲ್ಲಿ ಕೃಷಿ ಮಾಡಿಕೊಂಡಿದ್ದ ಅವರು, ವಿವಿಧ ಸಂಘ ಸಂಸ್ಥೆಗಳಲ್ಲಿ ಮತ್ತು ಕೈಗಡವಾಗಿ ₹5.20 ಲಕ್ಷ ಸಾಲ ಮಾಡಿದ್ದರು’ ಎಂದು ಅವರ ಪತ್ನಿ ಅನಿತಾ ಕುಲಕರ್ಣಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

‘ಸಾಲ ತೀರಿಸಲಾಗದೆ ಬೇಸತ್ತು ಮಧ್ಯಾಹ್ನದ ವೇಳೆ ಕೋರ್ಟ್ ಆವರಣದಲ್ಲಿರುವ ಇ- ಗ್ರಂಥಾಲಯದ ಸಂಗ್ರಹ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ