Breaking News

‘ವಚನ ಕಟ್ಟು ರಕ್ಷಿಸಿದ ಮಾಚಿದೇವ’

Spread the love

ವದತ್ತಿ: ‘ಹನ್ನೆರಡನೇ ಶತಮಾನದ ಬಸವಣ್ಣನವರ ಕಾಲದಲ್ಲಿನ ವಚನ ಕಟ್ಟುಗಳನ್ನು ರಕ್ಷಿಸುವಲ್ಲಿ ಮಾಚಿದೇವ ಪ್ರಮುಖ ಪಾತ್ರ ವಹಿಸಿದ್ದರು. ಜೊತೆಗೆ ಸಕಲ ಶರಣರ ವಸ್ತ್ರಗಳನ್ನು ಶುಚಿಗೊಳಿಸುವಲ್ಲಿ ತಲ್ಲೀನರಾಗಿದ್ದರು’ ಎಂದು ತಹಶೀಲ್ದಾರ್‌ ಎಂ.ಎನ್.ಹೆಗ್ಗನ್ನವರ ಹೇಳಿದರು.‌

ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಮಡಿವಾಳ ಮಾಚಿದೇವರ ಜಯಂತಿ ಆಚರಿಸಿ ಮಾತನಾಡಿದ, ವಚನಗಳ ರಕ್ಷಣೆ ವೇಳೆ ಮಾಚಿದೇವರು ವೀರಭದ್ರನ ಅವತಾರ ತಾಳಿದ್ದು ವಿಶೇಷ. ಇಂದು ಮಡಿವಾಳ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ಶ್ಲಾಘನೀಯವೆಂದರು.

ಶಾಸಕರ ಸಹೋದರ ಅಶ್ವತ್ ವೈದ್ಯ ಅವರು ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಎಂ.ಎನ್. ಗುಂಡಪ್ಪಗೋಳ, ಯಲ್ಲಪ್ಪ ಮಡಿವಾಳರ, ಅಜ್ಜಪ್ಪ ಮಡಿವಾಳರ, ರಾಜು ಮಡಿವಾಳರ, ಸುರೇಶ ಮಡಿವಾಳರ, ಬಸವರಾಜ ಮಡಿವಾಳರ ಇದ್ದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ