Breaking News

ನಾನು ಸುಳ್ಳು ಹೇಳಿದ್ದರೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ: ಸಿಎಂ

Spread the love

ಬೆಂಗಳೂರು: ನಾನು ಸುಳ್ಳು ಹೇಳುತ್ತಿದ್ದೇನೆ ಎಂದಾದರೇ ನಾನು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಕರ್ನಾಟಕ ತೆರಿಗೆ ಕಟ್ಟುವುದರಲ್ಲಿ 2ನೇ ಸ್ಥಾನದಲ್ಲಿದೆ. ನಮಗೆ ಸರಿಯಾಗಿ ಅನುದಾನ ಹಂಚಿಕೆಯಾಗಿಲ್ಲ. ಈ ವಿಷಯವನ್ನು ನಾವು ಕೇಳದೇ ಸುಮ್ಮನಿರಬೇಕಾ? ಎಂದು ತೆರಿಗೆ ವಿಷಯದಲ್ಲಿ ಅನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ(CM Siddaramaiah) ಕಿಡಿ ಕಾರಿದರು.

 

ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರದ ಪ್ರತಿಭಟನೆ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿಂದು ಟೀಕೆ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಯಡಿಯೂರಪ್ಪನವರ ತರಾ ತಲೆ ಅಲ್ಲಾಡಿಸಿಕೊಂಡು, ಬಾಯಿ ಮುಚ್ಚಿಕೊಂಡು ಇರಬೇಕಾ? ಅವರು ಅನ್ಯಾಯವಾದರೂ ತೆಪ್ಪಗೆ ಇರುತ್ತಾರೆ. ಆದರೆ ನಾವು ಪ್ರತಿಭಟನೆ ಮಾಡಬಾರದಾ? ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಈ ಬಾರಿ 4 ಲಕ್ಷದ 30 ಸಾವಿರ ಕೋಟಿ ತೆರಿಗೆ ಸಂಗ್ರಹವಾಗುತ್ತಿದೆ. ನಮಗೆ ಕೇಂದ್ರದಿಂದ 50, 257 ಕೋಟಿ ರೂಪಾಯಿ ಅನುದಾನ ಮಾತ್ರ ಬರುತ್ತದೆ. ಉಳಿದಿದ್ದನ್ನು ಅವರೇ ಇಟ್ಟುಕೊಳ್ಳುತ್ತಾರೆ ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ