Breaking News

ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಸಿಎಂ‌ vs ಡಿಸಿಎಂ ಕೋಲ್ಡ್ ವಾರ್..!

Spread the love

ಬೆಂಗಳೂರು: ರಾಜ್ಯ‌ಸಭೆಗೆ ಕೈ‌ ಅಭ್ಯರ್ಥಿಗಳ ಘೋಷಣೆ ಬೆನ್ನಲ್ಲೇ ಲೋಕಸಭೆ ಟಿಕೆಟ್ ಹಂಚಿಕೆ ಕುರಿತು ಕಾಂಗ್ರೆಸ್ ನಲ್ಲಿ‌ ಬಣ ಬಡಿದಾಟ ಜೋರಾಗಿದೆ. ಕೈ ನಲ್ಲಿ ಟಿಕೆಟ್ ವಾರ್ ನಡೆಯುತ್ತಿರುವುದು ಸಿಎಂ‌ ಸಿದ್ದ ರಾಮಯ್ಯ ಮತ್ತು ಡಿಸಿಎಂ ಡಿ.ಕೆ.‌ ಶಿವಕುಮಾರ್ ನಡುವೆ. ಇರಿಬ್ಬರ ಶೀತಲ ಸಮರ ಮತ್ತೆ ಮುಂದುವರಿದಿದೆ.

LOKASABHE: ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಸಿಎಂ‌ vs ಡಿಸಿಎಂ ಕೋಲ್ಡ್ ವಾರ್..!

 

ತಮ್ಮ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಇಬ್ಬರು ಪೈಪೋಟಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಇದರಿಂದ ಹೈಕಮಾಂಡ್ ಇಕ್ಕಟ್ಟಿಗೆ ಸಿಲಿಕಿದೆ. ಆದ್ದರಿಂದ ಅಭ್ಯರ್ಥಿಗಳ ‌ಆಯ್ಕೆ ಇನ್ನು ಪೂರ್ಣಗೊಂಡಿಲ್ಲ ಎಂದು ತಿಳಿದು ಬಂದಿದೆ.

ಏತನ್ಮಧ್ಯೆ ಡಿಕೆಶಿ ಅವರು, ಮತ್ತೊಂದು ಸಮೀಕ್ಷೆ ನಡೆಸಿ ಅಭ್ಯರ್ಥಿ ಅಂತಿಮ ಪಟ್ಟಿ ತಯಾರಿಗೆ ನಿರ್ಧರಿಸಲಾಗಿದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಎಲ್ಲವೂ ಕ್ರಮಬದ್ಧವಾಗಿ ನಡೆದರೆ ಕಾಂಗ್ರೆಸ್ ಗೆ ಲಾಭ. ಇಲ್ಲದಿದ್ದರೆ ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ